ಮಂಗಳೂರು (www.vknews.com) : ಭಾರತ್ ಸೋಶಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್ ವತಿಯಿಂದ 7ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಶಿಕ್ಷಕರೋರ್ವರಿಗೆ ಸನ್ಮಾನ ಸಮಾರಂಭವು ಜ.14ರಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಗರದ ಬಲ್ಮಠದಲ್ಲಿರುವ ಸಹೋದಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲರಾದ ಡಾ. ಉದಯ ಕುಮಾರ್ ಇರ್ವತ್ತೂರು, ಮಂಗಳಗಂಗೋತ್ರಿ ಕೊಣಾಜೆಯ ಸೂಪರಿಂಟೆಂಡೆಂಟ್ ಹರೀಶ್ ಕುಮಾರ್ ಕುಡ್ತಡ್ಕ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮೊಂಟೆಪದವಿನ ಕರ್ನಾಟಕ ಪಬ್ಲಿಕ್ ಶಾಲೆಯ ನಿವೃತ್ತ ಶಿಕ್ಷಕ ಲಕ್ಷ್ಮಣ ಪೂಜಾರಿ ಎಸ್ ರವರಿಗೆ ಸನ್ಮಾನ ಕೂಡ ನಡೆಯಲಿದೆ. ಅಧ್ಯಕ್ಷತೆಯನ್ನು ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ನೂರುಲ್ ಅಮೀನ್ ವಹಿಸಲಿದ್ದಾರೆ. ಟ್ರಸ್ಟ್ ನ ಉಪಾಧ್ಯಕ್ಷ ಅಶ್ರಫ್ ಎಂ. ಸಿ., ನಿಯಾಝುರ್ರಹ್ಮಾನ್ ಪೆರ್ಲ ಭಾಗವಹಿಸಲಿದ್ದಾರೆ.
ಅಲ್ಲದೇ, ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ನಂತರದ ಸುಮಾರು 150 ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಣೆ ಮಾಡಲಾಗುವುದು. ಸರಕಾರದ ಕೋವಿಡ್ ನಿಯಮವನ್ನು ಅನುಸರಿಸಿ ಕಾರ್ಯಕ್ರಮ ನಡೆಯಲಿದೆ ಎಂದು ಭಾರತ್ ಸೋಶಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್ ನ ಕಾರ್ಯದರ್ಶಿ ಆಕಿಫುದ್ದೀನ್ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.