(www.vknews.com) : ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಗೃಹರಕ್ಷಕರ ಮಕ್ಕಳ ವಿದ್ಯಾಭ್ಯಾಸ ಹಾಗೂ ಗೃಹರಕ್ಷಕರ ಮತ್ತು ಅವರ ಕುಟುಂಬದವರಿಗೆ ವೈದ್ಯಕೀಯ ವೆಚ್ಚ ಸಹಾಯ ಧನವನ್ನು ನೀಡಲಾಗುತ್ತದೆ.
ಮಂಗಳೂರು ಘಟಕದ ಗೃಹರಕ್ಷಕಿ ಸುಲೋಚನಾ ಇವರ ಮಗಳಾದ ಶ್ರೇಯಾ ಎಸ್. ಶೆಟ್ಟಿ ಇವರ ಮೊದಲನೇ ವರ್ಷದ ಬಿ.ಇ. (ಇಂಜಿನಿಯರಿಂಗ್) ವ್ಯಾಸಂಗಕ್ಕಾಗಿ ರೂ. 12,000/- ಕೇಂದ್ರ ಕಛೇರಿಯಿಂದ ಸಹಾಯ ಧನ ಮಂಜೂರಾಗಿರುತ್ತದೆ. ಈ ನಿಟ್ಟಿನಲ್ಲಿ ದಿನಾಂಕ 23-12-2021ನೇ ಗುರುವಾರÀದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಸುಲೋಚನಾ ಇವರಿಗೆ ಚೆಕ್ ನೀಡಿದರು.
ಈ ಸಂದರ್ಭದಲ್ಲಿ ಕಛೇರಿಯ ಪ್ರಥಮ ದರ್ಜಿ ಸಹಾಯಕಿ ಅನಿತಾ ಟಿ.ಎಸ್, ಗೃಹರಕ್ಷಕರಾದ ವಾರಿಜಾ, ಭಾರತಿ ಆರ್., ಮೋಹಿನಿ, ಕವಿತಾ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.