ಬೆಳ್ಳಾರೆ (www.vknews.com) : ದಿನಾಂಕ: 12-01-2022 ರಂದು ಇನ್ಫೋಸಿಸ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಬೆಳ್ಳಾರೆ ಘಟಕಕ್ಕೆ ಕಂಪ್ಯೂಟರ್ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಬೆಳ್ಳಾರೆ ಘಟಕದ ಪ್ರಭಾರ ಘಟಕಾಧಿಕಾರಿಯಾದ ಶ್ರೀ ಪಿ ವಸಂತ ಇವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಪ ಸಮಾದೇಷ್ಟರಾದ ರಮೇಶ್, ಕಛೇರಿ ಅಧೀಕ್ಷಕರಾದ ರತ್ನಾಕರ, ಪ್ರಥಮ ದರ್ಜಿ ಸಹಾಯಕಿ ಅನಿತಾ ಟಿ. ಎಸ್, ಮೀನಾಕ್ಷಿ ಹಾಗೂ ಸುಬ್ರಹ್ಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಹರೀಶ್ಚಂದ್ರ, ಜಯಂತ, ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ದಿನೇಶ್ , ಮುಲ್ಕಿ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಲೋಕೇಶ್, ಗೃಹರಕ್ಷಕರಾದ ಸುನೀಲ್ ಕುಮಾರ್ (ಸಾರ್ಜೆಂಟ್), ದಿವಾಕರ್, ಸುಲೋಚನಾ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.