ಕೋಲಾರ (ವಿಶ್ವಕನ್ನಡಿಗ ನ್ಯೂಸ್): ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕಳೆದ ಬಾರಿಯಂತೆ ಈ ಬಾರಿಯು ಸರಳವಾಗಿ ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ ಯುಕೇಶ್ ಕುಮಾರ್ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಆಚರಣೆಯ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಬಾರಿಯೂ ಸಹ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ .
ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಬೆಳಿಗ್ಗೆ 8.00 ಗಂಟೆಗೆ ಧ್ವಜಾರೋಹಣ ನೆರವೇರಿಸಿ ನಂತರ ಬೆಳಿಗ್ಗೆ 8.45 ಕ್ಕೆ ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿದರು.
ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣವನ್ನು ಲೋಕೋಪಯೋಗಿ ಇಲಾಖೆಯವರು ಯಾವುದೇ ವ್ಯತ್ಯಾಸವಾಗದಂತೆ ಮಾಡಬೇಕು.
ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯವರು ನೋಡಿಕೊಳ್ಳಬೇಕು.
ಕಾರ್ಯಕ್ರಮಕ್ಕೆ ಬರುವ ಗಣ್ಯರು ಮತ್ತು ಅತಿಥಿಗಳಿಗೆ ಲಘು ಉಪಹಾರ ವ್ಯವಸ್ಥೆಯನ್ನು ಆಹಾರ ಇಲಾಖೆ ಮತ್ತು ಅಬಕಾರಿ ಇಲಾಖೆಯವರು ವ್ಯವಸ್ಥೆ ಮಾಡಬೇಕು.
ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕೋಮುಲ್ ಅವರು ಸಹಿ ತಿಂಡಿ ಮತ್ತು ಮಜ್ಜಿಗೆ ವಿತರಿಸಬೇಕು ಎಂದು ಸೂಚಿಸಿದರು ಒಟ್ಟಾರೆ ರಾಷ್ಟ್ರೀಯ ಹಬ್ಬವನ್ನು ಯಾವುದೇ ಲೋಪ ಬರದಂತೆ ಅರ್ಥ ಪೂರ್ಣವಾಗಿ ಅಚರಿಸೋಣ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ || ಸ್ನೇಹಾ , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಚಿನ್ ಘೋರ್ಪಡೆ , ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.