(www.vknews.com) : “ಮನೆ ಮನೆಗಳಿಗೆ ಮನ ಮನಗಳಿಗೆ ಸ್ವಾಮಿ ವಿವೇಕಾನಂದರ ಚಿಂನೆಗಳು ಪಸರಿಸಬೇಕು. ಮುಂದಿನ ಹಲವಾರು ವರ್ಷಗಳ ವರೆಗೆ ನಮ್ಮ ಪ್ರತಿಯೊಬ್ಬರ ಬದುಕಿನ ಸಂವಿಧಾನ ಅಗಬಲ್ಲದ್ದು ಸ್ವಾಮಿ ವಿವೇಕಾನಂದರ ಚಿಂತನೆಗಳು. ಅವರ ಆದರ್ಶಗಳು ಪ್ರತಿಯೊಬ್ಬ ಮನುಷ್ಯನನ್ನು ಮಾನವತ್ವದಿಂದ ದೈವತ್ವದೆಡೆಗೆ ಒಯ್ಯಬಲ್ಲದ್ದು. ” ಎಂದು ಬೆಂಗಳೂರಿನ ಕೇಂದ್ರೀಯ ತನಿಖಾ ಸಂಸ್ಥೆಯ ಎಸ್. ಹಿರಿಯ ಪಿ., ಐ ಪಿ ಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಹೇಳಿದರು.
ರಾಮಕೃಷ್ಣ ಮಠ ಮಂಗಳೂರು ಮತ್ತು ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆನ್ ಲೈನ್ ಮೂಲಕ ನಡೆದ ರಾಷ್ಟೀಯ ಯುವ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಮ್ಮ ದೇಶದ ಭವಿಷ್ಯ ಯುವ ಸಮುದಾಯದ ಕೈಯಲ್ಲಿದೆ. ಈ ನಿಟ್ಟಿನಲ್ಲಿ ಯುವ ಸಮುದಾಯವನ್ನು ರೂಪುಗೊಳಿಸಬೇಕಾಗಿದೆ. ವ್ಯಕ್ತಿತ್ವ ವಿಕಸನದ ಮೂಲಕ ರಾಷ್ಟ್ರನಿರ್ಮಾಣ ಎಂಬುದು ಬಹಳ ಮುಖ್ಯವಾದದ್ದು, ಇದನ್ನು ಸಾಧಿಸಲು ಸ್ವಾಮಿ ವಿವೇಕಾನಂದರ ವಿಚಾರಗಳು ಅತ್ಯಗತ್ಯ ಎಂದು ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪೆÇ್ರ. ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಪರಮಪೂಜ್ಯ ಸ್ವಾಮಿ ಜಿತಕಾಮಾನಂದಜಿ ಮಾತನಾಡಿ “ಸ್ವಾಮಿ ವಿವೇಕಾನಂದರು ತ್ಯಾಗ ಮತ್ತು ಸೇವೆಗಳ ಸಾಕಾರ ಮೂರ್ತಿ ಅವರ ನಡೆ ನುಡಿಗಳು ಪ್ರತಿಯೊಬ್ಬರಿಗೂ ಆದರ್ಶವಾಗಬೇಕು” ಎಂದರು.
ಕಾರ್ಯಕ್ರಮದಲ್ಲಿ ಪೂಜ್ಯ ಸ್ವಾಮಿ ಏಕಗಮ್ಯನಂದಜಿ, ವಿಧಾನ ಪರಿಷತ್ನ ಮಾಜಿ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಷ್ಟೀಯ ಸೇವಾ ಯೋಜನೆಯಲ್ಲಿ ರಾಷ್ಟ್ರ ಮಟ್ಟದ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿ ಪಡೆದ ಕುಮಾರಿ ಬಿಂದ್ಯಾ ಎಲ್. ಶೆಟ್ಟಿ ಉಪಸ್ಥಿತರಿದ್ದರು.
ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಕಿಶೋರ್ ಕುಮಾರ್ ಸಿ. ಕೆ., ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಯಕರಾದ ಡಾ. ಶ್ರೀಪತಿ ಕಲ್ಲೂರಾಯ, ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ವಿದ್ಯಾಲಯದ ಸಂಚಾಲಕರಾದ ಕೃಷ್ಣಪ್ರಸಾದ್ ನಡ್ಸಾರ್, ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು ವಿಶ್ವವಿದ್ಯಾಲಯ, ನಿಟ್ಟೆ (ಪರಿಗಣಿಸಲ್ಪಟ್ಟಿರುವ) ವಿಶ್ವವಿದ್ಯಾಲಯ, ಆದಿಚುಂಚನಗಿರಿ ವಿಶ್ವವಿದ್ಯಾಲಯ, ಮೈಸೂರು ವಿಶ್ವವಿದ್ಯಾಲಯ, ಶ್ರೀನಿವಾಸ ವಿಶ್ವವಿದ್ಯಾಲಯ, ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು, ಕುಂದಾಪುರದ ಭಂಡಾರ್ಕರ್ಸ್ ಕಾಲೇಜುಗಳು ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಗೂ ಆಸಕ್ತ ಸಾರ್ವಜನಿಕರು ಈ ಆನ್ಲೈನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಗಳಾದ ವಿವೇಕಾನಂದ ಪದವಿ ಪೂರ್ವ ವಿದ್ಯಾಲಯ, ವಿವೇಕಾನಂ ದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ಯಶಸ್ ಘಟಕ, ವಿವೇಕಾನಂದ ವಸತಿನಿಲಯದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಕಾರ್ಯಕ್ರಮವನ್ನು ತಮ್ಮ ಸಂಸ್ಥೆಗಳಲ್ಲಿ ವೀಕ್ಷಿಸಿದರು.
ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸ್ವಾಗತಿಸಿದರು. ಮಂಗಳೂರು ವಿಶ್ವವಿದ್ಯಾಲಯದ ಡಾ. ಚಂದ್ರು ಹೆಗ್ಡೆ ವಂದಿಸಿದರು. ಅಭಿμÉೀಕ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.