ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಜಿಲ್ಲೆಯಲ್ಲಿ ಜನನ ಹಾಗೂ ಮರಣ ನೋಂದಣಿ ಪ್ರಕ್ರಿಯೆಯನ್ನು ಶೇ.100ರಷ್ಟು ಕಡ್ಡಾಯವಾಗಿ ದಾಖಲಿಸಲೇ ಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದರು.
ಅವರು ಜ.19ರ ಬುಧವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಜನನ-ಮರಣ ನೋಂದಣಿ ಹಾಗೂ ಕೃಷಿ ಅಂಕಿ ಅಂಶಗಳ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನನ-ಮರಣದ ಯಾವುದೇ ನೋಂದಣಿ ಕೂಡ ಬಿಟ್ಟುಹೋಗಬಾರದು ಮತ್ತು ಮರಣ ನೋಂದಣಿಯಲ್ಲಿ ಮರಣ ಕಾರಣವನ್ನು ನಿಖರವಾಗಿ ದಾಖಲಿಸಬೇಕು, ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಈ ಪ್ರಕ್ರಿಯೆ ನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆಯಿಂದ ನಿರ್ವಹಿಸಬೇಕು, ಯಾವ ನೋಂದಣಿ ಘಟಕದಲ್ಲಿ ಅವು ಸಂಭವಿಸುತ್ತವೋ ಅಲ್ಲಿಯೇ ಕಡ್ಡಾಯವಾಗಿ ದಾಖಲಿಸುವಂತೆ ಸಭೆಯಲ್ಲಿದ್ದ ನೋಂದಣಿದಾರರಿಗೆ ಅವರು ಸೂಚಿಸಿದರು.
ಡಿಜಿಟಲ್ ಕೀ ಬಳಸಿಯೇ ಈ ನೋಂದಣಿ ಪ್ರಕ್ರಿಯೆನ್ನು ನಿರ್ವಹಿಸಬೇಕು, ಪ್ರಸ್ತಾವನೆಗಳಿದ್ದರೆ ಸಲ್ಲಿಸುವಂತೆಯೂ ಅವರು ಈ ಸಂದರ್ಭದಲ್ಲಿ ತಿಳಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.