(ವಿಶ್ವ ಕನ್ನಡಿಗ ನ್ಯೂಸ್) : ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುಬ್ರಹ್ಮಣ್ಯ ಘಟಕದ ಗೃಹರಕ್ಷಕರಾದ ದಿ|| ಅಜೀತ್ ಯು ಇವರು ಇತ್ತೇಚೆಗೆ ಆಕಸ್ಮಿಕವಾಗಿ ಮೃತಹೊಂದಿರುತ್ತಾರೆ. ಇವರ ಕುಟುಂಬದವರಿಗೆ ಕೇಂದ್ರ ಕಛೇರಿಯಿಂದ ಗೃಹರಕ್ಷಕರ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನವನ್ನು ನೀಡಿರುತ್ತಾರೆ. ಈ ನಿಟ್ಟಿನಲ್ಲಿ ದಿನಾಂಕ 12-01-2022ನೇ ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಸುಬ್ರಹ್ಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಹರೀಶ್ಚಂದ್ರ ಇವರಿಗೆ ರೂಪಾಯಿ 10,000/- ಮೌಲ್ಯದ ಚೆಕ್ ನೀಡಿದರು.
ಈ ಸಂದರ್ಭದಲ್ಲಿ ಕಛೇರಿಯ ಉಪಸಮಾದೇಷ್ಟರಾದ ರಮೇಶ್, ಅಧೀಕ್ಷಕರಾದ ರತ್ನಾಕರ್, ಪ್ರಥಮ ದರ್ಜಿ ಸಹಾಯಕಿ ಅನಿತಾ ಟಿ.ಎಸ್, ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ದಿನೇಶ್ , ಮುಲ್ಕಿ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಲೋಕೇಶ್, ಸುನೀಲ್ ಕುಮಾರ್ (ಸಾರ್ಜೆಂಟ್), ಗೃಹರಕ್ಷಕರಾದ ಸುಲೋಚನಾ, ಜಯಲಕ್ಷ್ಮಿ, ದಿವಾಕರ್, ಜಯಂತ ಮುಂತಾದವರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.