(ವಿಶ್ವ ಕನ್ನಡಿಗ ನ್ಯೂಸ್) : ಪರೋಪಕಾರಿ ಹಾಗೂ ಬಡವರಿಗೆ 250 ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿ ಕೊಟ್ಟ ಎಲ್ಲಾ ಜಾತಿ- ಧರ್ಮದವರನ್ನು ಸಮಾನರಾಗಿ ಸ್ವೀಕರಿಸಿದ ಗಡಿನಾಡಿನಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯದ ಕೊಂಡಿಯಾಗಿ ಕೆಲಸ ಮಾಡಿದ ಒಬ್ಬ ಪ್ರಾಮಾಣಿಕ ವ್ಯಕ್ತಿತ್ವದ ಕಾಸರಗೋಡು ಬದಿಯಡ್ಕ ಕಿಲ್ಲಿಂಗರ ಸಾಯಿರಾಂ ಭಟ್ ರವರ ನಿಧನಕ್ಕೆ ಕೆಪಿಸಿಸಿಯ ಮಾಜಿ ಕಾರ್ಯದರ್ಶಿ ಹಾಗೂ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ.ಎಂ.ಶಹೀದ್ ತೆಕ್ಕಿಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನನ್ನೊಂದಿಗೆ ತುಂಬಾ ಆತ್ಮೀಯರಾಗಿದ್ದ ಅವರ ಅಗಲುವಿಕೆಯು ಅತ್ಯಂತ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬದವರಿಗೆ , ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಟಿ.ಎಂ.ಶಹೀದ್ ರವರು ತಮ್ಮ ಸಂತಾಪದಲ್ಲಿ ತಿಳಿಸಿರುತ್ತಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.