ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯದಲ್ಲಿ ಕೋವಿಡ್ ಸೋಂಕಿತರ ಆರೈಕೆ ಕೇಂದ್ರ ಗ್ರಾಮೀಣ ಭಾಗ ಮತ್ತು ನಗರದ ಭಾಗಗಳಲ್ಲಿ ಇರುವ ಹಾಸ್ಟೆಲ್ ಗಳನ್ನು ಕೋವಿಡ್ ಕೇಂದ್ರಗಳನ್ನಾಗಿ ಪರಿವರ್ತಿಸುವುದರ ಹಿಂದೆ ಗ್ರಾಮೀಣ ಪ್ರದೇಶದ ಬಡ, ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರವಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ತಾಹಿರ್ ಹುಸೇನ್ ಆರೋಪಿಸಿದೆ.
ರಾಜ್ಯ ಸರ್ಕಾರ ಕರೋನಾ ಸೊಂಕಿತರಿಗಾಗಿ ರಾಜ್ಯದಲ್ಲಿರುವ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ತೆರಳುವಂತೆ ಸೂಚನೆ ನೀಡಿ ಅಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಿದೆ ಆದರೆ ರಾಜ್ಯದಲ್ಲಿ ಕೋವಿಡ್ ಕೇಂದ್ರ ಆರಂಭವಾಗಿ ಇದೀಗ ಎಂಟು ದಿನಗಳು ಕಳೆದಿವೆ ಸೊಂಕಿತರನ್ನು ಕೇಂದ್ರಕ್ಕೆ ಸೇರಿಸಿಲ್ಲ ಕೋವಿಡ್ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯು ತ್ತಿರುವದರಿಂದ ಸೋಂಕಿತ ರಿಲ್ಲದೆ ಕೇಂದ್ರ ಖಾಲಿ ಖಾಲಿಯಾಗಿದೆ.
ಕರೋನಾ ವೈರಸ್ ತಡೆಗಟ್ಟಲು ಬೇಕಾದ ಸಿದ್ಧತೆ ಮಾಡಿಕೊಳ್ಳುವುದು ಸರ್ಕಾರದ ಕರ್ತವ್ಯ ಆದರೆ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಅಡ್ಡಿ ಉಂಟು ಮಾಡಿ ಇಲ್ಲಿನ ವಿದ್ಯಾರ್ಥಿಗಳಿಗೆ ಬೇರೆ ಕಡೆ ಹೋಗುವಂತೆ ಹೇಳುತ್ತಿದ್ದಾರೆ ಇದರಿಂದ ವಿದ್ಯಾರ್ಥಿಗಳ ಪಾಲಕರಿಗೆ ವಿದ್ಯಾರ್ಥಿಗಳಿಗೆ ತುಂಬಾ ಕಷ್ಟಕರವಾಗಿದೆ ಸರ್ಕಾರ ಕೋವಿಡ್ ತಡೆಗಟ್ಟುವಿಕೆಗಾಗಿ ಬೇರೆ ಕಡೆ ಕೋವಿಡ್ ಆರೈಕೆ ಕೇಂದ್ರಗಳನ್ನು ಮಾಡಬಹುದಿತ್ತು ಆದ್ದರಿಂದ ಹಿಂದೆ ನೂರಾರು ಬಡ ವಿದ್ಯಾರ್ಥಿಗಳು ಇದ್ದಾರೆ ಇದರಿಂದ ಸಾಕಷ್ಟು ತೊಂದರೆ ಆಗಿದೆ.
ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ ವಸತಿ ಶಾಲೆಗಳನ್ನು ವಿದ್ಯಾರ್ಥಿಗಳಿಗೆ ಮೀಸಲಿಟ್ಟು ಕೋವಿಡ್ ಸೋಂಕಿತರಿಗಾಗಿ ಪರ್ಯಾಯ ವ್ಯವಸ್ಥೆ ಮುಂದಾಗಬೇಕಾಗಿದೆ ಕೂಡಲೇ ಈ ನೀತಿಗಳನ್ನು ಕೈಬಿಡಬೇಕೆಂದು ರಾಜ್ಯಸರ್ಕಾರಕ್ಕೆ ತಾಹಿರ್ ಹುಸೇನ್ ಒತ್ತಾಯಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.