ಸಿದ್ದಾಪುರ(www.vknews.in): SKSSF ಕೊಡಗು ಜಿಲ್ಲಾ ಸಮಿತಿಯ ವತಿಯಿಂದ “ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪ” ಎಂಬ ಧ್ಯೇಯವಾಕ್ಯದೊಂದಿಗೆ ಕಳೆದ 14 ವರ್ಷಗಳಿಂದ ಗಣರಾಜ್ಯೋತ್ಸವದ ಅಂಗವಾಗಿ ಮಾನವ ಸರಪಳಿ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮ ಆಯೋಜಿಸುತ್ತಾ ಬಂದಿದೆ. ಈ ಬಾರಿ ಸಿದ್ದಾಪುರದಲ್ಲಿ ಜನವರಿ 26 ನೇ ತಾರೀಕು ಸಂಜೆ 4 ಗಂಟೆಗೆ ನಡೆಯುವ ಮಾನವ ಸರಪಳಿ ಕಾರ್ಯಕ್ರಮ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಯಶಸ್ವಿಗೊಳಿಸಬೇಕಾಗಿ SKSSF ಕೊಡಗು ಜಿಲ್ಲಾ ಸಮಿತಿಯು ಕರೆ ನೀಡಿದೆ.
ವಿವಿಧತೆಯಲ್ಲಿ ಏಕತೆ ಎಂಬ ತತ್ವದಡಿ ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತ, ಹಲವು ಜಾತಿ, ಧರ್ಮ, ಜನಾಂಗ, ಭಾಷೆ, ಆಚಾರ -ವಿಚಾರ ಮತ್ತು ಸಂಸ್ಕೃತಿಯನ್ನೊಳಗೊಂಡ ಸೌಹಾರ್ದತೆ, ಸಾಮರಸ್ಯಕ್ಕೆ ಮಾದರಿಯಾದ ದೇಶದಲ್ಲಿ; ಕೆಲ ಸಮಾಜಘಾತುಕ ಶಕ್ತಿಗಳಿಂದ ಶಾಂತಿ-ಸಾಮರಸ್ಯಕ್ಕೆ ಧಕ್ಕೆಯಾಗುತ್ತಿದೆ. ಅಧಿಕಾರದ ಮುನ್ನಡೆಗಾಗಿ ಶಾಶ್ವತ ಮೌಲ್ಯಗಳು ಹಾಳಾಗುತ್ತಿದೆ. ಸಂವಿಧಾನ ಬದ್ಧವಾದ ಹಕ್ಕುಗಳನ್ನು ತಡೆಹಿಡಿಯಲಾಗುತ್ತಿದೆ. ಸೌಹಾರ್ದತೆಯ, ಸಹಬಾಳ್ವೆಯ ದೇಶ ಕಟ್ಟಲು ನಾವೆಲ್ಲ ಒಂದಾಗಬೇಕಿದೆ.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಉಪ ಖಾಝಿ ಶೈಖುನಾ ಅಬ್ದುಲ್ಲಾ ಮುಸ್ಲಿಯಾರ್, ಅಬ್ದುರ್ರಹ್ಮಾನ್ ಮುಸ್ಲಿಯಾರ್, ಇಸ್ಮಾಯಿಲ್ ಉಸ್ತಾದ್, ಇಬ್ರಾಹಿಂ ಮಾಸ್ಟರ್, ಯಾಕೂಬ್ ಕೆ. ಎ, ಸಾಮಾಜಿಕ ಹೋರಾಟಗಾರರಾದ ಭರತ್, ಅಡ್ವೊಕೇಟ್ ವೆಂಕಟೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಸಾಮಾಜಿಕ ಕಾರ್ಯಕರ್ತ ಜಿನಾಸುದ್ದೀನ್ ಶುಂಟಿಕೊಪ್ಪ ಹಾಗೂ ಇನ್ನಿತರ ಧರ್ಮಗುರುಗಳು, ರಾಜಕೀಯ ಮತ್ತು ಸಾಮಾಜಿಕ ಮುಖಂಡರುಗಳು ಭಾಗವಹಿಸುವ ಮಾನವ ಸರಪಳಿ ಹಾಗೂ ಸೌಹಾರ್ದ ಸಂಗಮದೊಂದಿಗೆ ಕೈಜೋಡಿಸಿ ಯಶಸ್ವಿಗೊಳಿಸಬೇಕಾಗಿ SKSSF ಕೊಡಗು ಜಿಲ್ಲಾ ಸಮಿತಿಯು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.