ಶಿವಮೊಗ್ಗ (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯದಲ್ಲಿ ಹಿಂದೂ ಮುಸ್ಲಿಂ ಸಂತೋಷ ದಿಂದ ಸಹೋದರರಂತೆ ಬದುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಲವರಿಂದ ಗೊಂದಲ ಸೃಷ್ಟಿಸಲಾಗುತ್ತಿದೆ, ಕಾಲೇಜಿನ ಆಡಳಿತ ಮಂಡಳಿ ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೋ ಒಂದು ವ್ಯವಸ್ಥೆಯನ್ನ ಕಾನೂನು ಬದ್ಧಗೊಂದಲ ಸೃಷ್ಟಿಸಲಾಗುತ್ತಿದೆ, ಶಾಲಾ ಆಡಳಿತ ಮಂಡಳಿ ಇದನ್ನ ಗಮನ ಹರಿಸಬೇಕು. ಹಿಜಾಬ್ ಕುರಿತು ಆಯಾ ಶಾಲಾ ಆಡಳಿತ ಗಮನ ಹರಿಸಿ ಯಾವುದೇ ತೊಂದರೆ ಆಗದಂತೆ ಸಂಬಂಧಪಟ್ಟ ವಿದ್ಯಾರ್ಥಿಗಳ ವಿರುದ್ಧ ಕ್ರಮ ವಹಿಸಬೇಕು. ಸರ್ಕಾರ ಈ ಕುರಿತು ಗಮನ ಹರಿಸುವ ಮೊದಲು ಶಾಲಾ ಕಾಲೇಜು ಆಡಳಿತ ಮಂಡಳಿ ತಮ್ಮ ಕರ್ತವ್ಯ ನಿಭಾಯಿಸಬೇಕು ಎಂದು ಅವರು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.