ಎಂಟನೇ ದಿನಕ್ಕೆ ಕಾಲಿರಿಸಿದ ಎನ್ಐಟಿಕೆ ಅಕ್ರಮ ಟೋಲ್ ಗೇಟ್ ವಿರುದ್ಧದ ಧರಣಿ
ಸುರತ್ಕಲ್ (www.vknews.in) : ಸಾಮಾಜಿಕ ಹೋರಾಟಗಾರ ಆಸಿಫ್ ಆಪದ್ಬಾಂಧವ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಎನ್ಐಟಿಕೆ ಅಕ್ರಮ ಟೋಲ್ ಗೇಟ್ ವಿರುದ್ಧದ ಅಹೋರಾತ್ರಿ ಧರಣಿಯು ಸೋಮವಾರ ಎಂಟನೇ ದಿನಕ್ಕೆ ಕಾಲಿರಿಸಿದೆ.
ವೈದ್ಯರು ಪರೀಕ್ಷೆ ಮಾಡಿ ಚಿಕಿತ್ಸೆ ನೀಡಿದರು..
ಪ್ರತಿಭಟನೆಯ ಮಧ್ಯೆ ಕಳೆದ ಎರಡು ದಿನಗಳಿಂದ ಆಸಿಫ್ ಅವರ ಆರೋಗ್ಯದ ಸ್ಥಿತಿ ಹದಗೆಟ್ಟಿದ್ದು, ಇಂದು ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸುರತ್ಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಆಸಿಫ್ ರವರನ್ನು ಆಸ್ಪತ್ರೆಗೆ ತೆರಳುವಂತೆ ಮನವಿ ಮಾಡಿದರೂ ನಿರಾಕರಿಸಿದ ಆಸಿಫ್ ನನಗೆ ನ್ಯಾಯ ಸಿಗುವವರೆಗೂ ಈ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದರು, ಆ ಬಳಿಕ ವೈದ್ಯರನ್ನು ಸ್ಥಳಕ್ಕೆ ಕರೆಸಿ ಆಸಿಫ್ ರವರನ್ನು ಪರೀಕ್ಷಿಸಿ ಚಿಕಿತ್ಸೆ ನೀಡಲಾಯಿತು.
ಸಾಯಂಕಾಲ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಟ್ಯೂಬ್ ಲೈಟ್ ಒಡೆದು ಗಾಜಿನ ಚೂರುಗಳ ಮೇಲೆ ಮಲಗಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಸಾಮಾಜಿಕ ಕಾರ್ಯಕರ್ತರು ಲೇಖಕರೂ ಆದ ಮರವಂತೆ ಪ್ರಕಾಶ್ ಪಾಡಿಯಾರ್, ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹ್ಮದ್, ಕಾಪು ವಲಯಾಧ್ಯಕ್ಷ ನಿಝಾಮ್ ಪಡುಬಿದ್ರಿ, ಬಂಟರ ಸಂಘ ಕಂಬಳ ಕಟ್ಟೆ ಇದರ ಅಧ್ಯಕ್ಷರು ಹಾಗೂ ಸರ್ವ ಪದಾಧಿಕಾರಿಗಳು, ಲಯನ್ಸ್ ಕ್ಲಬ್ ಉಡುಪಿ ಜಿಲ್ಲಾಧ್ಯಕ್ಷರು ಹಾಗೂ ಸರ್ವ ಪದಾಧಿಕಾರಿಗಳು. ಕಾಪು ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಯು.ಸಿ.ಶೇಖಬ್ಬ, ಸಾಮಾಜಿಕ ಕಾರ್ಯಕರ್ತೆ ಮಸ್ತುರ ಬಾನು ಪಡುಬಿದ್ರೆ, ಸಿಕ್ಸರ್ ಅಸೋಸಿಯೇಷನ್ ಕದಿಕೆ ಇದರ ಅಧ್ಯಕ್ಷರು ಮುತ್ತರ್ ಪಿ.ಸಿ, ಉಪಾಧ್ಯಕ್ಷ ಜಮಾಲುದ್ದೀನ್, ಕಾರ್ಯದರ್ಶಿ ರಜಾಕ್, ಸಿದ್ದಿಕ್, ಹನೀಶ್, ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ನೀಡಿದರು.
ವರದಿ: ಅದ್ದಿ ಬೊಳ್ಳೂರು
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.