ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ
(www.vknews.in) : ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ ‘ನೀನೇ ರಾಜಕುಮಾರ’ ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ ನಡೆಯಲಿದ್ದು. ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ.
ಕೋವಿಡ್ ಸಂಕಷ್ಟಗಳ ನಂತರ ನಡೆಯುತ್ತಿರುವ ಪ್ರಥಮ ಕನ್ನಡ ಸಂಗೀತ ಕಾರ್ಯಕ್ರಮದಲ್ಲಿ ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಅನುರಾಧ ಭಟ್, ಮೇಘನಾ ಭಟ್, ದುಬೈ ಉದ್ಯಮಿ, ಗಾಯಕ ಹರೀಶ್ ಶೇರಿಗಾರ್ ಹಾಗೂ ಹತ್ತಕ್ಕೂ ಹೆಚ್ಚು ಸಂಗೀತಗಾರರು ಭಾಗವಹಿಸಲಿದ್ದು, ಈ ಸಂಗೀತ ಕಾರ್ಯಕ್ರಮದ ನಿರೂಪಣೆಯನ್ನು ನಿರೂಪಕಿ ಅನುಪಮ ಭಟ್, ಆರ್ ಜೆ ಎರಾಲ್ ನಡೆಸಿಕೊಡಲಿದ್ದಾರೆ.
ದುಬೈನ ಪುನೀತ್ ರಾಜಕುಮಾರ್ ಅಭಿಮಾನಿಗಳು ಆಯೋಜಿಸುತ್ತಿರುವ ಈ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು 0552443737, 0555592434, 050 3911719. ಅಥವಾ ನೇರವಾಗಿ http://www.eticketing.ae ಮೂಲಕ ಟಿಕೆಟ್ ಕಾದಿರಿಸಬಹುದು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.