ಕುಂದಾಪುರ,(ವಿಶ್ವ ಕನ್ನಡಿಗ ನ್ಯೂಸ್ ): ಇಲ್ಲಿನ ಖಾಸಗೀ ಪದವಿ ಕಾಲೇಜಿನ ಸಾರ್ವಜನಿಕ ಸಂಪರ್ಕ ಅಧಿಕಾರಿಯಿಂದ ವಿದ್ಯಾರ್ಥಿನಿಯರಿಗೆ ಮೊಬೈಲ್ ಮೂಲಕ ಅಶ್ಲೀಲ ಸಂದೇಶ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಗುರುವಾರ ಕಾಲೇಜಿನ ಎದುರುಗಡೆ ಪ್ರತಿಭಟನೆ ನಡೆಸಿದರು.ಕುಂದಾಪುರದ ಪ್ರತಿಷ್ಟಿತ ಬಿ.ಬಿ.ಹೆಗ್ಡೆ ಕಾಲೇಜಿನ ಪಿ.ಆರ್.ಒ ಆಗಿರುವ ನಾಗರಾಜ ಶೆಟ್ಟಿ ಎಂಬುವರ ವಿರುದ್ಧವೇ ಆರೋಪ ಕೇಳಿ ಬಂದಿದ್ದು, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಂ.ಸುಕುಮಾರ್ ಶೆಟ್ಟಿ ಹಾಗೂ ಆರೋಪಿತ ನಾಗರಾಜ ಶೆಟ್ಟಿಯನ್ನು ಪ್ರತಿಭಟನಾ ಸ್ಥಳಕ್ಕೆ ಕರೆಯಿಸುವಂತೆ ಆಗ್ರಹಿಸಿದರು.ಮಧ್ಯಾಹ್ನದ ವರೆಗೂ ಪ್ರತಿಭಟನೆ ನಡೆಸಿದ ವಿಧ್ಯಾರ್ಥಿ ವಿದ್ಯಾರ್ಥಿನಿಯರು ಆರೋಪಗಳಿಗೆ ಸಂಬಂಧಿಸಿದಂತೆ ದಾಖಲೆಗಳಿದ್ದು ಆರೋಪಿ ವಿರುದ್ಧ ಕ್ರಮಕೈಗೊಳ್ಳದೇ ಇದ್ದರೆ ದಾಖಲೆಗಳನ್ನು ಬಹಿರಂಗಗೊಳಿಸುವುದಾಗಿ ಹೇಳಿದ ಬಳಿಕ ಕಾಲೇಜಿನ ಪ್ರಾಂಶುಪಾಲ ಸ್ಥಳಕ್ಕೆ ಬಂದು ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸಿದರು. ವಿದ್ಯಾರ್ಥಿಗಳ ಮನವಿ ಸ್ವೀಕರಿಸಿದ ಕಾಲೇಜು ಪ್ರಾಂಶುಪಾಲ ಉಮೇಶ್, ಶಿಸ್ತುಕ್ರಮ ಜರುಗಿಸುವ ಭರವಸೆ ನೀಡಿದರು, ಆದರೆ ಪಿಆರ್ ಓ ಅನ್ನು ಸ್ಥಳಕ್ಕೆ ಕರೆಸಬೇಕೆಂದು ಪಟ್ಟು ಹಿಡಿದ ವಿದ್ಯಾರ್ಥಿಗಳು, ಬಿಸಿಲನ್ನೂ ಲೆಕ್ಕಿಸದೇ ಸ್ಥಳದಲ್ಲೇ ಧರಣಿ ಕುಳಿತ ವಿದ್ಯಾರ್ಥಿಗಳು, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರನ್ನು ಸ್ಥಳಕ್ಕೆ ಕರೆಸುವಂತೆ ಪಟ್ಟು ಹಿಡಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.