ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್) ಕುಡಿಯುವ ನೀರು ಪೂರೈಸುವ ಮೇಕೆದಾಟು ಯೋಜನೆಯನ್ನು ಹೈಜಾಕ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವು ರಾಜ್ಯದ ಜನರನ್ನು ದಿಕ್ಕುತಪ್ಪಿಸುವ ರಾಜಕಾರಣ ಮಾಡುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ವ್ಯಂಗ್ಯವಾಡಿದರು.
ನಗರದ ಪತ್ರಕರ್ತರ ಭವನದಲ್ಲಿ ಶಿವೋತ್ಸವದ ಅಂಗವಾಗಿ ಶನಿವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದ ಅವರು ರಾಜ್ಯದಲ್ಲಿ 7 ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷವು ತನ್ನ ಅಧಿಕಾರಾವಧಿಯಲ್ಲಿ ಡಿಪಿಆರ್ ಮಾತ್ರ ಮಾಡಿ ಕಾಲಹರಣ ಮಾಡಿದೆಯೇ ಹೊರತು ಯೋಜನೆಯ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲವೆಂದು ದೂರಿದ ಸಚಿವರು ಇದೀಗ ಮೇಕೆದಾಟು ಮುಂದಿಟ್ಟುಕೊಂಡು ಜನರನ್ನು ಮೂರ್ಖರನ್ನಾಗಿ ಮಾಡಲು ಹೊರಟಿದ್ದಾರೆ ಈ ರಾಜ್ಯದ ಮೂರ್ಖರಲ್ಲ ರಾಜಕೀಯ ದುರುದ್ದೇಶದಿಂದ ಮೇಕೆದಾಟಿ ಪಾದಯಾತ್ರೆ ನಡೆಸಲಾಗುತ್ತದೆ ಅಧಿಕಾರದಲ್ಲಿದ್ದಾಗ ಅನುಷ್ಠಾನಗೊಳಿಸಲು ಕಾಳಜಿ ಇರಲಿಲ್ಲ ಮಾಜಿ ಸಿಎಂ ಕುಮಾರಸ್ವಾಮಿ ಅವರ ಅಧಿಕಾರಾವಧಿಯಲ್ಲಿ ಡಿಪಿಆರ್ ಸಿದ್ದ ಆಯಿತು ಹೊರತು ಅದರಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಕೊಡುಗೆ ಇಲ್ಲ ಇದು ರಾಜಕೀಯ ಪ್ರೇರಿತ ಹೋರಾಟ ಅದು ಫಲಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ದ ಹರಿಹಾಯ್ದರು.
ಸರಕಾರ ಈ ಬಾರಿಯ ಅಧಿವೇಶನದಲ್ಲಿ ವೇತನ ಹೆಚ್ಚಳದ ಬಗ್ಗೆ ಲೇಖನಾನುಧಾನ ಪಡೆದಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಕೊರೋನಾ ಮೊದಲ ಅವಧಿಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರೂ ಸೇರಿದಂತೆ ಎಲ್ಲಾ ಸಚಿವರು 2 ವರ್ಷಗಳ ಕಾಲ ವೇತನವನ್ನೇ ಪಡೆದಿಲ್ಲ ಈ ಬಗ್ಗೆ ಯಾಕೆ ಯಾರು ಬರೆಯುವುದಿಲ್ಲ.ನಮಗೂ ಕೂಡ ಖಾಸಗಿ ಬದುಕಿದೆ ಎಂದು ಹೇಳುವ ಮೂಲಕ ವೇತನ ಹೆಚ್ಚಳವನ್ನು ಸಮರ್ಥಿಸಿಕೊಂಡರು.
ನೂತನ ತಾಲೂಕುಗಳಾದ ಚೇಳೂರು ಮತ್ತು ಮಂಚೇನಹಳ್ಳಿಯಲ್ಲಿ ತಾಲೂಕು ಕೇಂದ್ರಕ್ಕೆ ಬೇಕಾದ ಎಲ್ಲಾ ಯೋಜನೆಗಳಿಗೆ ಶೀಘ್ರದಲ್ಲಿಯೇ ಶಿಲಾನ್ಯಾಸ ಮಾಡಲಾಗುತ್ತದೆ ಎಂದ ಸಚಿವರು ಆಸ್ಪತ್ರೆ, ತಾಲೂಕು ಕಚೇರಿ,ಕಾಲೇಜು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತದೆ ಈ ಸಂಬಂಧ ಈ ಬಾರಿಯ ಬಜೆಟ್ನಲ್ಲಿ ವಿಶೇಷ ಅನುದಾನ ಬಿಡುಗಡೆಯಾಗಲಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು ಜಿಲ್ಲೆಯ ಅಭಿವೃಧ್ಧಿಗೆ ಯಾವ ಯೋಜನೆಗಳನ್ನು ಘೋಷಣೆ ಮಾಡಿದ್ದೇನೆ ಅದನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸುವ ಕೆಲಸವನ್ನು ಮಾಡುತ್ತೇನೆ ಚಿಕ್ಕಬಳ್ಳಾಪುರದಿಂದ ಗೌರಿಬಿದನೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಅಭಿವೃಧ್ಧಿಗೆ 338 ಕೋಟಿ ರೂಗಳ ಅನುದಾನವನ್ನು ಬಿಡುಗಡೆಯಾಗಿದೆ ಎಂದರು.
ಜಿಲ್ಲೆಯ ಅಭಿವೃದ್ದಿಗೂ ಆಯವ್ಯಯದಲ್ಲಿ ಘೋಷಣೆಯಾಗುವ ಯೋಜನೆಗಳಿಗೂ ಸಂಬಂಧವೇ ಇಲ್ಲ ಆಯವ್ಯಯದಲ್ಲಿ ಘೋಷಣೆಯಾದ ಎಷ್ಟು ಯೋಜನೆಗಳು ಜಾರಿಗೆ ಬಂದಿವೆ ಎಂಬುದನ್ನು ಗಮನಿಸಿದರೆ ನನ್ನ ಮಾತು ಅರ್ಥವಾಗುತ್ತದೆ ನಂದಿ ಬೆಟ್ಟದಲ್ಲಿ ಸುಮಾರು 93 ಕೋಟಿ ಅನುದಾನದಲ್ಲಿ ಸಿದ್ಧವಾಗುತ್ತಿರುವ ರೋಪ್ವೇ ಯೋಜನೆ ಆಯವ್ಯಯದಲ್ಲಿ ಇಲ್ಲದ ಮೆಡಿಕಲ್ ಕಾಲೇಜು ನಿರ್ಮಿಸಲಾಗುತ್ತಿದೆ ಎಂದರಲ್ಲದೆ ಜಿಲ್ಲೆಯಲ್ಲಿ ಆಗಿರುವ ಎಷ್ಟೋ ಅಭಿವೃದ್ದಿ ಕಾರ್ಯಗಳಿಗೆ ಆಯವ್ಯಯದಲ್ಲಿ ಘೋಷಣೆ ಆಗಿಲ್ಲ ಬಜೆಟ್ನಲ್ಲಿ ಘೋಷಣೆ ಆಗಿದ್ದ ತಕ್ಷಣ ಅನುಷ್ಠಾನವಾಗುವುದಿಲ್ಲ ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಕೋಲಾರ ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆರೆಗಳಿಗೆ ಎತ್ತಿನ ಹೊಳೆ ನೀರನ್ನು ಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಇದಕ್ಕೆ ಅಗತ್ಯವಿರುವ ಅನುದಾನವನ್ನು ಈ ಬಡ್ಜೆಟ್ನಲ್ಲಿ ಮೀಸಲಿಡುವ ಬಗ್ಗೆ ಸುಳಿವನ್ನು ನೀಡಿದರು.
ಉಕ್ರೇನ್ನಲ್ಲಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳ ಸುರಕ್ಷತೆಗೆ ಮುಖ್ಯಮಂತ್ರಿಗಳು ಮತ್ತು ಸರಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಮುಖ್ಯಮಂತ್ರಿಗಳು ಕೇಂದ್ರದ ವಿದೇಶಾಂಗ ಸಚಿವಾಲಯದ ಜತೆ, ಉಕ್ರೇನ್ ರಾಯಭಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದಾರೆ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ನೀವಾಗಿ ನೀವು ತೀರ್ಮಾನ ತೆಗೆದುಕೊಂಡು ರೊಮೇನಿಯಾ,ಪೋಲ್ಯಾಂಡ್ ಗಡಿಗಳಿಗೆ ಹೋಗುತ್ತಿರುವ ಮಾಹಿತಿಯಿದೆ ಇದಾಗಬಾರದು. ಭಾರತ ಸರಕಾರ ಬೇರೆ ಬೇರೆ ಹಂತದಲ್ಲಿ ಮಾತುಕತೆ ನಡೆಸುತ್ತಿದೆ ವಿದ್ಯಾರ್ಥಿಗಳು ಎಲ್ಲಿದ್ದಿರೋ ಅಲ್ಲಿಯೇ ಸುರಕ್ಷಿತವಾಗಿ ಇರಬೇಕು. ಶೀಘ್ರದಲ್ಲಿಯೇ ಕದನವಿರಾಮ ಘೋಷಣೆಯಾಗುವ ಸಂಭವವಿದೆ. ಇದಾದ ಬಳಿಕ ಜಿಲ್ಲೆಯ 9 ಮಂದಿಯ ಜತೆಗೆ ಎಲ್ಲರನ್ನೂ ಸುರಕ್ಷಿತವಾಗಿ ನಮ್ಮ ದೇಶಕ್ಕೆ ಕರೆತರಲಾಗುವುದು ಅಲ್ಲಿಯೇ ಉಳಿಯಲು ಇಚ್ಚಿಸುವವರು ಅಲ್ಲಿಯೇ ಇರಬಹುದಾಗಿದ್ದು ಅವರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಸರಕಾರ ಒದಗಿಸಲಾಗುವುದು. ಈ ವಿಚಾರದಲ್ಲಿ ಯಾವ ಪೋಷಕರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ನಿಮ್ಮೊಂದಿಗೆ ನಾವಿದ್ದೇವೆ.ನಿಮ್ಮೆಲ್ಲಾ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದ್ರೆಡ್ಡಿ(ಬಾಬು),ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ,ಮುಖಂಡರಾದ ಕೆ.ವಿ.ನವೀನ್ ಕಿರಣ್,ಹಾಪ್ಕಾಮ್ಸ್ ಮಾಜಿ ಅಧ್ಯಕ್ಷ ಶ್ರೀನಿವಾಸ್, ನಗರಸಭೆಯ ಮಾಜಿ ಅಧ್ಯಕ್ಷ ಕೆ.ವಿ.ಮಂಜುನಾಥ್,ಸುಧಾ ವೆಂಕಟೇಶ್,ಮಿಲ್ಟನ್ ವೆಂಕಟೇಶ್,ಗಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.