ಬೆಳ್ತಂಗಡಿ (www.vknews.in) : ಧರ್ಮಸ್ಥಳ ಕನ್ಯಾಡಿಯಲ್ಲಿ ಭಜರಂಗದಳ ಮುಖಂಡ ಹಾಗೂ ಬಿಜೆಪಿ ನಾಯಕ ಕೃಷ್ಣ ಎಂಬಾತ ದಲಿತ ಸಮುದಾಯಕ್ಕೆ ಸೇರಿದ ದಿನೇಶ್ ಎಂಬ ವ್ಯಕ್ತಿಯನ್ನು ಹತ್ಯೆಗೈದ ದುರ್ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ ಎಂದು ಎಸ್ ಡಿ ಪಿ ಐ ರಾಜ್ಯ ಪ್ರದಾನ ಕಾರ್ಯದರ್ಶಿ ಬಿ ಆರ್ ಭಾಸ್ಕರ್ ಪ್ರಸಾದ್ ಬೆಳ್ತಂಗಡಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ದಲಿತ ವ್ಯಕ್ತಿಯನ್ನು ಹತ್ಯೆಮಾಡಿದ ಬಿಜೆಪಿ ಹಾಗೂ ಭಜರಂಗದಳ ಮುಖಂಡನಿಗೆ ಕಠಿಣ ಶಿಕ್ಷೆ ನೀಡಬೇಕು. ಅವನಿಗೆ ಸಹಕಾರ ನೀಡಿದ ಭಜರಂಗದಳ ಮುಖಂಡರ ಮೇಲು ಕೇಸು ದಾಖಲಿಸಬೇಕು ಹಾಗೂ ಮಾನ್ಯ ಶಾಸಕರು ದಲಿತ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡುಬೇಕೆಂದು ಎಸ್ ಡಿ ಪಿ ಐ ಆಗ್ರಹಿಸುತ್ತದೆ. ರಾಜ್ಯ ಸರಕಾರ ಮೃತ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ಧನವನ್ನು ನೀಡಬೇಕೆಂದು ಆಗ್ರಹಿಸಿದರು. ಹತ್ಯೆಯಾದ ದಲಿತ ವ್ಯಕ್ತಿ ದಿನೇಶ್ ಕನ್ಯಾಡಿ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ, ದ ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸದಾತ್ ಬಜತ್ತೂರ್, ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆ ಮಜಲ್, ಜಿಲ್ಲಾ ಸಮಿತಿ ಸದಸ್ಯ ನವಾಝ್ ಶರೀಫ್ ಕಟ್ಟೆ, ಹೈದರ್ ನಿರ್ಸಲ್, ಹನೀಫ್ ಪುಂಜಾಲಕಟ್ಟೆ, ನಿಝಮ್ ಗೇರುಕಟ್ಟೆ, ಹನೀಫ್ ಟಿ ಎಸ್, ಫಝಲ್ ಉಜಿರೆ ಸೇರಿದಂತೆ ಹಲವಾರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.