ಗಲ್ಫ್ ನಾದ್ಯಂತ ಕನ್ನಡ ಕಲಿಸುವ ”ನಮ್ಮ ಕನ್ನಡ ಕಲಿಕೆ”ಗೆ ಪದ್ಮಶ್ರೀ ಹರೇಕಳ ಹಾಜಬ್ಬ ಚಾಲನೆ
ದುಬೈ (ವಿಶ್ವ ಕನ್ನಡಿಗ ನ್ಯೂಸ್) : ಕೆಸಿಎಫ್ ಯುಎಇ ಪ್ರತಿಭೋತ್ಸವ ಮತ್ತು ಕೆಸಿಎಫ್ ಡೇ ಫೆಬ್ರವರಿ 20ರಂದು, ದುಬೈ ಅಲ್ ಖುಸೈಸ್ ನಲ್ಲಿ ಜರುಗಿತು. ಅನಿವಾಸಿ ಕನ್ನಡಿಗರ ಅತಿದೊಡ್ಡ ಸಾಂಸ್ಕೃತಿಕ ಕಲಾ ಸಮ್ಮಿಲನವಾಗಿದೆ ಪ್ರತಿಭೋತ್ಸವ 22.
ಕರ್ನಾಟಕ ಕಲ್ಚರಲ್ ಫೌಂಡೇಶನ್ – ಕೆಸಿಎಫ್ ಯುಎಇ ಆಯೋಜಿಸಿದ ನ್ಯಾಷನಲ್ ಪ್ರತಿಭೋತ್ಸವ-2022 ಫೆಬ್ರವರಿ 20 ಭಾನುವಾರ ಬೆಳಗ್ಗೆ 8 ರಿಂದ ರಾತ್ರಿ 10ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಇಂಡಿಯನ್ ಅಕಾಡೆಮಿ ಸ್ಕೂಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗಲ್ಫ್ ನಾದ್ಯಂತ ಕನ್ನಡ ಕಲಿಸುವ ನಮ್ಮ ಕನ್ನಡ ಕಲಿಕೆ ಪ್ರಾರಂಭೋತ್ಸವಕ್ಕೆ ಪದ್ಮ ಶ್ರೀ ಹರೇಕಳ ಹಾಜಬ್ಬ ಚಾಲನೆ ನೀಡಿದರು.
ನಾಲ್ಕು ವೇದಿಕೆಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಯುಎಇ ಯ ಏಳು ಎಮಿರೇಟ್ಸ್ ಗಳಿಂದ 300ಕ್ಕೂ ಅಧಿಕ ಕನ್ನಡಿಗ ಪ್ರತಿಭೆಗಳು 88 ವಿಭಾಗಗಳಲ್ಲಿ ಸ್ಪರ್ಧಿಸಿದರು. ಇದರಲ್ಲಿ ಕೆಸಿಎಫ್ ಕಾರ್ಯಕರ್ತರು ವಿದ್ಯಾರ್ಥಿಗಳು ಮತ್ತು 200 ರಷ್ಟುಕುಟುಂಬಗಳು ಪಾಲ್ಗೊಂಡಿದ್ದರು. ಪ್ರತಿಭೋತ್ಸವದಲ್ಲಿ ಮಹಿಳೆಯರಿಗೆ ಪುಡ್ಡಿಂಗ್, ಬೆಸ್ಟ್ ಔಟ್ ಆಫ್ ವೇಸ್ಟ್, ರಸಪ್ರಶ್ನೆ ವಿಭಾಗಗಳಲ್ಲಿ ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿತ್ತು.
ಬೆಳಿಗ್ಗೆ 8 ಗಂಟೆಗೆ ಪ್ರಾರಂಭಗೊಂಡ ಇನ್ಸೆಫ್ಷನ್ ಸಮಾರಂಭದಲ್ಲಿ ಪ್ರತಿಭೋತ್ಸವ ಸ್ವಾಗತ ಸಮಿತಿ ಛೇರ್ಮನ್ ಸಯ್ಯದ್ ಮಖ್ಡೂಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು, ಅಬ್ದುಲ್ ಹಮೀದ್ ಸಅದಿ (FC, ಕೆಸಿಎಫ್ ಅಂತರರಾಷ್ಟ್ರೀಯ ಸಮಿತಿ )ಸಭೆಯನ್ನು ಉದ್ಘಾಟಿಸಿದರು, ಕರ್ನಾಟಕ ಮುಸ್ಲಿಂ ಜಮಾಅತ್ ಉಪಫ್ಯಾಕ್ಷರಾದ ಬಿ ಎಂ ಮುಮ್ತಾಝ್ ಅಲಿ ಭಾಷಣ ಮಾಡಿದರು.
ಪದ್ಮ ಶ್ರೀ ಹರೇಕಳ ಹಾಜಬ್ಬ ಮತ್ತು ಶಾರ್ಜಾ ಅಲ್ ಖಾಸಿಮಿಯ್ಯ ವಿಶ್ವ ವಿದ್ಯಾಲಯದಲ್ಲಿ ಅರಬ್ ಸಾಹಿತ್ಯದಲ್ಲಿ ಪ್ರಥಮ ಪಡೆದ ಅಹ್ಮದ್ ಮುಶ್ತಾಕ್ ರವರನ್ನು ಗೌರವಿಸಲಾಯಿತ್ತು. ಅಸ್ಸಯ್ಯದ್ ತ್ವಾಹ ಬಾಫಖಿ ತಂಗಳ್ ದುಆ ನೆರೆವೇರಿಸಿದರು.
ಸಲೀಂ ಸೂಫಿ ಖಾನ್ (ಜುವೆಲ್ ಹೌಸ್), ಡಾ ಯೂಸುಫ್ (ಅಧ್ಯಕ್ಷರು ಬಿಸಿಎಫ್ ದುಬೈ), ಅಬ್ದುಲ್ಲಾ ಮದುಮೂಲೆ (ಝಾಯಿದ್ ಫೌಂಡೇಷನ್ ಅಬುಧಾಬಿ), ಇಬ್ರಾಹಿಂ ಗಡಿಯಾರ್ (ಅಬ್ದುಲ್ ನಾಸರ್ ತಾಯಲ್ , ಮುಹಮ್ಮದ್ ಹಾಜಿ ಕುಕ್ಕುವಳ್ಳಿ, ರಫೀಕ್ ಪಿ ಕೆ, ರಾಝಿಕ್ ಉಳ್ಳಾಲ, ರಫೀಕ್ ಪಿಕೆ, ಮುಹಮ್ಮದ್ ಅಲಿ ಉಚ್ಚಿಲ, ಡಾ ಕಾಪು ಮುಹಮ್ಮದ್, ಹಿದಾಯತ್ ಅಡ್ಡೂರ್ ಸೇರಿದಂತೆ ಹಲವು ಖ್ಯಾತ ಉದ್ಯಮಿಗಳು, ಸಾಂಘಿಕ ನಾಯಕರುಗಳು, ಸಾಮಾಜಿಕ ನೇತಾರರುಗಳು ಭಾಗವಹಿಸಿದರು .
2013 ಫೆಬ್ರವರಿ 13 ರಂದು ಮಾಯಾನಗರಿ ದುಬೈ ಯಲ್ಲಿ ಜನ್ಮ ತಾಳಿದ ಜನ್ಮತಾಳಿದ ಕರ್ನಾಟಕ ಕಲ್ಚರಲ್ ಫೌಂಡೇಶನ್ 15000 ಕ್ಕೂ ಮಿಕ್ಕ ಕನ್ನಡಿಗ ಸದಸ್ಯರನ್ನೊಳಗೊಂಡು ಅರಬ್ ರಾಷ್ಟ್ರಗಳು ಮತ್ತು ಮಲೇಷ್ಯಾ ಲಂಡನ್ ನಲ್ಲಿ ಕಾರ್ಯಾಚರಿಸುತ್ತಿದೆ. ಹಲವಾರು ಸಾಮಾಜಿಕ, ಶೆಕ್ಷಣಿಕ, ಸಾಮುದಾಯಿಕ ಸೇವೆಗಳೊಂದಿಗೆ ಗುರುತಿಸಿಕೊಂಡಿರುವ ಕೆ.ಸಿ.ಎಫ್ ನಿರಾಶ್ರಿತರಿಗೆ ಆಶ್ರಯ ಯೋಜನೆ, ಬಡವರ ಕಲ್ಯಾಣ ಯೋಜನೆ, ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಸಹಾಯ, ಉತ್ತರ ಕರ್ನಾಕದಲ್ಲಿ ಉಚಿತ ಶಿಕ್ಷಣ ಸಂಸ್ಥೆಗಳು ಮೊದಲಾದ ಜನಪರ ಸೇವೆಗಳನ್ನುಮಾಡುತ್ತಾ ಬರುತ್ತಿದೆ.
ಗಲ್ಫ್ ರಾಷ್ಟ್ರದಲ್ಲಿ ಅಲ್ಲಿನ ಸರಕಾರದ ಅನುಮೋದನೆಯೊಂದಿಗೆ ಮೊತ್ತ ಮೊದಲ ಬಾರಿಗೆ ಗಲ್ಫ್ ಇಶಾರ ಕನ್ನಡ ಮಾಸಿಕವು ಬಿಡುಗಡೆಗೊಳಿಸಿ ಪ್ರತಿಯೊಬ್ಬಅನಿವಾಸಿ ಕನ್ನಡಿಗನ ಮನೆ ಬಾಗಿಲಿಗೆ ತಲುಪುತ್ತಿದೆ. ಇದು ವಿದೇಶ ರಾಷ್ಟ್ರಗಳಲ್ಲಿ ಕೆಸಿಎಫ್ ಕನ್ನಡ ಭಾಷೆ, ಜಲ, ನೆಲ, ಸಂಸ್ಕೃತಿಗೆ ನೀಡುವ ಗೌರವವಾಗಿರುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ಮೊದಲಾದ ಭಾರತದ ರಾಷ್ಟ್ರೀಯ ದಿನಗಳನ್ನು ವಿವಿಧ ಎಮಿರೇಟ್ಸ್ ಗಳಲ್ಲಿ ವಾಸಿಸುತ್ತಿರುವ ಅನಿವಾಸಿ ಕನ್ನಡಿಗರನ್ನುಸೇರಿಸಿ ವಿಜೃಂಭಣೆಯಿಂದ ನಡೆಸಲಾಗುತ್ತದೆ.
ಅನಿವಾಸಿ ಕನ್ನಡಿಗರ ಪಾಲಿಗೆ ಆಶಾಕಿರಣವಾಗಿ ಕೊರೋನಾ ಮಹಾಮಾರಿ ಸಂದರ್ಭದಲ್ಲಿ ಊರಿಗೆ ತೆರಳಲು ಸಂದಿಗ್ದ ಪರಿಸ್ಥಿತಿಯಲ್ಲಿ ಎಂಟಕ್ಕಿಂತ ಹೆಚ್ಚು ಚಾರ್ಟೆಡ್ ವಿಮಾನ ವ್ಯವಸ್ಥೆ, ಕಿಟ್ ವಿತರಣೆ, ದುಬೈ ಪೊಲೀಸ್ ಸಹಯೋಗದಲ್ಲಿ ಸ್ವಯಂ ಸೇವಕ ವ್ಯವಸ್ಥೆ, ವೀಸಾ, ಪಾಸ್ಪೋರ್ಟ್ ಸಮಸ್ಯೆಗಳಿಂದ ಊರಿನ ದಾರಿಯೇ ಕಮರಿ ಹೋದ ಅದೆಷ್ಟೋ ಪ್ರವಾಸಿಗಳಿಗೆ ಜಾತಿ ಧರ್ಮ ನೋಡದೆ ಕಾನೂನು ರೀತಿಯ ಸಹಾಯ ಮಾಡಿ ಕೊಟ್ಟು ಅವರನ್ನು ಊರಿಗೆ ಕಳುಹಿಸಿಕೊಟ್ಟು ಸಹಕರಿಸುತ್ತಿದೆ. ಚಿಕ್ಕ ಪುಟ್ಟ ಕಾರಣಗಳಿಂದ ಜೈಲು ಸೇರಿದ ಅಮಾಯಕರನ್ನು ಬಿಡುಗಡೆಗೊಳಿಸಿ ಅವರ ಕುಟುಂಬದ ಕಣ್ಣೀರು ಒರೆಸಿಕೊಟ್ಟಿದೆ.
ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ರೋಗಿಗಳನ್ನುಕಂಡು ಅವರಿಗೆ ಬೇಕಾದ ಎಲ್ಲಾ ರೀತಿಯ ಸಹಾಯ ಸಹಕಾರಗಳನ್ನು ಮಾಡಿ ಕೊಟ್ಟು ಅವರನ್ನು ಕುಟುಂಬಕ್ಕೆ ತಲುಪಿಸಿಕೊಟ್ಟಿದೆ. ವಿದೇಶ ರಾಷ್ಟ್ರಗಳಲ್ಲಿ ಅಫಘಾತದಿಂದ ಮರಣ ಹೊಂದಿದ ಕುಟುಂಬಗಳಿಗೆ ಸಂತ್ವಾನವನ್ನು ಮಾಡಿ ಯಾವುದೇ ಪ್ರತಿಫಲಾಪೇಕ್ಷೆ ಬಯಸದೆ ಅವರ ಕಣ್ಣೀರು ಒರೆಸುವಂತಹ ಕೆಲಸಗಳನ್ನು ಮಾಡುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.