ಮಲಪ್ಪುರಂ (ವಿಶ್ವ ಕನ್ನಡಿಗ ನ್ಯೂಸ್) : ಹಿಜಾಬ್ ಇಸ್ಲಾಂನ ಪ್ರಮುಖ ಭಾಗವಾಗಿದೆ, ಕರ್ನಾಟಕ ಹೈಕೋರ್ಟ್ ತೀರ್ಪು ದುರದೃಷ್ಟಕರ ಎಂದು ಕೇರಳ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯದ್ ಇಬ್ರಾಹಿಂ ಖಲೀಲ್ ಅಲ್-ಬುಖಾರಿ ತಂಙಳ್ ಹೇಳಿದ್ದಾರೆ. ಹಿಜಾಬ್ ಮುಸ್ಲಿಂ ಹುಡುಗಿಗೆ ಮೂಲಭೂತ ತತ್ವವಾಗಿದೆ. ಆದ್ದರಿಂದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಭಾರತದ ಸಂವಿಧಾನವು ಭಾರತದ ಯಾವುದೇ ನಾಗರಿಕನಿಗೆ ತನಗೆ ಇಷ್ಟವಾದುದನ್ನು ಧರಿಸುವ ಮತ್ತು ತಿನ್ನುವ ಹಕ್ಕನ್ನು ನೀಡುತ್ತದೆ. ಇಂತಹ ತೀರ್ಪಿನ ಹಿನ್ನೆಲೆಯಲ್ಲಿ, ಕ್ಯಾಂಪಸ್ ಒಳಗೆ ಮತ್ತು ಹೊರಗೆ ಹಲ್ಲೆಗೆ ಒಳಗಾಗುವ ಬಗ್ಗೆ ವಿದ್ಯಾರ್ಥಿನಿಯರು ಚಿಂತಿತರಾಗಿದ್ದಾರೆ. ಈ ಬಗ್ಗೆ ಆಯಾ ರಾಜ್ಯಗಳು ಜಾಗರೂಕರಾಗಿರಬೇಕು ಎಂದು ಅವರು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.