ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿನ ವಿರುದ್ದ ಅಸಮಾಧಾನ ವ್ಯಕ್ತಪಡಿಸಿ ಗುರುವಾರ ಮುಸ್ಲಿಂ ಸಮುದಾಯದವರು ರಾಜ್ಯದಾದ್ಯಂತ ಬಂದ್ ಆಚರಣೆ ಮಾಡಿದ ಬೆನ್ನಲ್ಲೆ ಜಿಲ್ಲೆಯ ಕಾಪುವಿನ ಪ್ರಸಿದ್ಧ ಮಾರಿಗುಡಿ ಪೂಜೆಯಲ್ಲಿ ಯಾವುದೇ ಮುಸ್ಲಿಂ ಸಮುದಾಯದವರಿಗೆ ಅಂಗಡಿ ನಡೆಸಲು ಅವಕಾಶ ನೀಡದಂತೆ ಕೋರಿ ಕಾಪು ಪುರಸಭೆಯ ಮುಖ್ಯಾಧಿಕಾರಿಗೆ ಪತ್ರ ಮುಖೇನ ಮನವಿ ಮಾಡಲಾಗಿರುವ ಪತ್ರವೊಂದು ವೈರಲ್ ಆಗುತ್ತಿದೆ.ಕಾಪು ಹಿಂದೂ ಕಾರ್ಯಕರ್ತರು ಎಂಬ ವಿಳಾಸದಲ್ಲಿರುವ ಪತ್ರದಲ್ಲಿ ಕಾಪು ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದು ಅದರಲ್ಲಿ ಕಾಪು ಪುರಸಭೆ ವ್ಯಾಪ್ತಿಯಲ್ಲಿ ಬರುವ ಪಡು ಗ್ರಾಮದ ಮೂರು ಮಾರಿಗುಡಿಗಳಲ್ಲಿ ದಿನಾಂಕ: 22-03-2022 ಮತ್ತು 23-03-2022 ರಂದು ನಡೆಯುವ ಮಾರಿಪೂಜೆಯಲ್ಲಿ ಯಾವುದೇ ಮುಸ್ಲಿಂ ಸಮುದಾಯದವರಿಗೆ ಅಂಗಡಿ/ಸ್ಟಾಲ್ಗಳನ್ನು ನಡೆಸಲು ಅವಕಾಶ ಕೊಡಬಾರದು ಒಂದು ವೇಳೆ ಮುಸ್ಲಿಂ ಸಮುದಾಯದವರಿಗೆ ಅಂಗಡಿ/ಸ್ಟಾಲ್ಗಳನ್ನು ನಡೆಸಲು ಅವಕಾಶಕೊಟ್ಟರೆ ಅದರಿಂದ ಉಂಟಾಗುವ ಯಾವುದೇ ತೊಂದರೆ ಅಥವಾ ಅನಾಹುತಗಳಿಗೆ ನೀವೆ ಜವಾಬ್ದಾರರು. ಆದುದರಿಂದ ತಾವು ಮುಸ್ಲಿಂ ಸಮುದಾಯದವರಿಗೆ ಅಂಗಡಿ ನಡೆಸಲು ಅವಕಾಶ ಕೊಡಬಾರದು ಎಂಬುದು ಮನವಿ ಪತ್ರದಲ್ಲಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.