ಚಿಕ್ಕಬಳ್ಳಾಪುರ,(ವಿಶ್ವ ಕನ್ನಡಿಗ ನ್ಯೂಸ್) ಏಪ್ರಿಲ್ 1 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಶ್ರೀ ಸತ್ಯ ಸಾಯಿ ಗ್ರಾಮದಲ್ಲಿ ಶ್ರೀ ಸತ್ಯ ಸಾಯಿ ಸರಳಾ ಮೇಮೊರಿಯಲ್ ಆಸ್ಪತ್ರೆಯ ನಿರ್ಮಾಣ ಕಾಮಗಾರಿಗೆ (Sri Sathya Sai memorial Hospital) ಶಂಕುಸ್ಥಾಪನೆಯನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ನೆರವೇರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸದರಿ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.
ಗೃಹ ಸಚಿವರ ಭೇಟಿ ನೀಡುವ ವೇಳೆಯಲ್ಲಿ ಅಧಿಕಾರಿಗಳು ನಿರ್ವಹಿಸಬೇಕಾಗಿರುವ ಕಾರ್ಯಗಳನ್ನು ಹಂಚಿಕೆ ಮಾಡಿ ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಕಟ್ಟು ನಿಟ್ಟಿನ ಸೂಚನೆಗಳನ್ನು ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್,ಚಿಕ್ಕಬಳ್ಳಾಪುರ ಡಿವೈಎಸ್ಪಿ ವಾಸುದೇವ್, ಚಿಂತಾಮಣಿ ಡಿವೈಎಸ್ಪಿ ಚಂದ್ರಶೇಖರ್, ಜಿಪಂ ಉಪ ಕಾರ್ಯದರ್ಶಿ ಬಿ.ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ: ತೇ-ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.