ಬಜ್ಪೆ (www.vknews.in) : ಪೊಲೀಸ್ ಠಾಣೆ ವ್ಯಾಪ್ತಿಯ ಗಂಜಿಮಠ ಪೆಟ್ರೋಲ್ ಪಂಪ್ ಬಳಿ ಬಸ್ಸೊಂದು ಪಲ್ಟಿಯಾದ ಪರಿಣಾಮ ನಾಲ್ಕು ಮಂದಿ ಗಾಯಗೊಂಡ ಘಟನೆ ಇಂದು ರಾತ್ರಿ ಸುಮಾರು 9 ಗಂಟೆಗೆ ನಡೆದಿದೆ.
ಶೃಂಗೇರಿಯಿಂದ ಮಂಗಳೂರಿಗೆ ಬರುತ್ತಿದ್ದ ನಿಶ್ಮಿತಾ ಕಂಪನಿಯ ಬಸ್ ನಿಯಂತ್ರಣ ತಪ್ಪಿ ರಸ್ತೆಯ ಬದಿ ಮಗುಚಿ ಬಿದ್ದಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಬಜ್ಪೆ ಪೊಲೀಸ್ ಠಾಣೆ ಸಿಬ್ಬಂದಿ ಸಂಚಾರ ಸುಗಮಗೊಳಿಸಿ, ಸಾರ್ವಜನಿಕರ ಸಹಕಾರದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿರುವುದಾಗಿ ತಿಳಿದು ಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.