ಕೋಲಾರ ( ವಿಶ್ವಕನ್ನಡಿಗ ನ್ಯೂಸ್ ): ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಜವಾಬ್ದಾರಿಯನ್ನು ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿರುವ ಬಿ.ವಿ.ಗೋಪಿನಾಥ್ ಸೋಮವಾರ ಬೆಳಗ್ಗೆ ವಹಿಸಿಕೊಂಡರು. ನಿಕಟಪೂರ್ವ ಅಧ್ಯಕ್ಷ ವಿ.ಮುನಿರಾಜು ಸಂಘದ ನಿರ್ಣಯ ಪುಸ್ತಕ ಹಾಗೂ ಇತರೆ ದಾಖಲಾತಿಗಳನ್ನು ಹಸ್ತಾಂತರಿಸುವ ಮೂಲಕ ಹೊಸ ಅಧ್ಯಕ್ಷರಿಗೆ ಜವಾಬ್ದಾರಿ ವಹಿಸಿಕೊಟ್ಟರು.
ಇದೇ ವೇಳೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೆ.ಎಸ್. ಗಣೇಶ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಕೆ. ಚಂದ್ರಶೇಖರ್ ಹಾಗೂ ಖಜಾಂಚಿಯಾಗಿ ಎ.ಜಿ.ಸುರೇಶ್ ಕುಮಾರ್ ಸಹ ಜವಾಬ್ದಾರಿಯನ್ನು ವಹಿಸಿಕೊಂಡರು. ಇದಕ್ಕೂ ಮುನ್ನಾ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಪಾ.ಶ್ರೀ.ಅನಂತರಾಮ್ ನೂತನ ಪದಾಧಿಕಾರಿಗಳಿಗೆ ಆಯ್ಕೆಯ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎ.ಸದಾನಂದ , ಕಾರ್ಯದರ್ಶಿ ಸಿ.ಜಿ.ಮುರಳಿ , ಕಾರ್ಯಕಾರಿ ಸಮಿತಿ ಸದಸ್ಯರಾದ ಎನ್.ರಾಮು , ನಾ.ಮಂ ಜುನಾಥ್ , ಕೆ.ಆಸೀಫ್ಪಾಷ , ವೆಂಕಟೇಶಪ್ಪ , ಎಂ.ನಾಗರಾಜಯ್ಯ , ಮುರಳಿ ಮೋಹನ್ , ಎಂ.ಲಕ್ಷ್ಮಣ ರವರು ಸಹ ಆಯ್ಕೆಯ ಪ್ರಮಾಣ ಪತ್ರಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಚುನಾವಣೆಯನ್ನು ಸುಸೂತ್ರವಾಗಿ ನಡೆಸಿಕೊಟ್ಟ ಜಿಲ್ಲಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಪಾ.ಶ್ರೀ ಅನಂತರಾಮ್ ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಎಸ್.ಎನ್.ಪ್ರಕಾಶ್ ( ಮಾಮಿ ) ರವರನ್ನು ಪತ್ರಕರ್ತರ ಸಂಘ ದಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಎನ್ ಮುನಿವೆಂಕಟೇಗೌಡ , ಕೆ.ಬಿ ಜಗದೀಶ್ , ಎಸ್ , ರವಿಕುಮಾರ್ , ಕೆ.ಎಸ್ ಸುದರ್ಶನ್ ಉಪಸ್ಥಿತರಿದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.