ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ..
ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ದೆಹಲಿಯ ಡಾಬ್ರಿ ಪ್ರದೇಶದಲ್ಲಿ 20 ವರ್ಷದ ಯುವಕನನ್ನು ಪುರುಷರ ಗುಂಪೊಂದು ಬೆಲ್ಟ್ ಮತ್ತು ದೊಣ್ಣೆಗಳಿಂದ ಥಳಿಸಿ ಕೊಂದಿದೆ. ಈ ಘಟನೆ ಏಪ್ರಿಲ್ 23 ರಂದು ನಡೆದಿದೆ. ಯುವಕ ಏಪ್ರಿಲ್ 26 ರಂದು ಮೃತಪಟ್ಟಿದ್ದಾನೆ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.
ಹೋಳಿ ಹಬ್ಬದ ಸಂದರ್ಭದಲ್ಲಿ ಸೂರಜ್ ಎಂಬಾತನೊಂದಿಗೆ ವಾಗ್ವಾದಕ್ಕಿಳಿದಿದ್ದ ಕೃಷ್ಣ ಎಂಬ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು. ಸೂರಜ್ ಮತ್ತು ಅವನ ಸ್ನೇಹಿತರು ಕೃಷ್ಣನ ಮೇಲೆ ಹಲ್ಲೆ ಮಾಡಿದರು. ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅವರಲ್ಲಿ ನಾಲ್ವರು ಅಪ್ರಾಪ್ತ ವಯಸ್ಸಿನವರಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.