ಸಾಮೂಹಿಕ ಪ್ರತಿಭಟನೆ ತೀವ್ರಗೊಂಡ ನಂತರ ರಾಜಪಕ್ಸೆ ರಾಜೀನಾಮೆ..
ಕೊಲಂಬೋ (ವಿಶ್ವ ಕನ್ನಡಿಗ ನ್ಯೂಸ್) : ಅಧ್ಯಕ್ಷ ಮತ್ತು ಪ್ರಧಾನ ಮಂತ್ರಿಯ ರಾಜೀನಾಮೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಭಾನುವಾರ ಕರೆ ನೀಡಿತ್ತು. ಇಅದರ ಬೆನ್ನಲ್ಲೇ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷ ಗೋಟಬಯ ಪ್ರಧಾನಿ ರಾಜಪಕ್ಸೆ ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಿದ ನಂತರ ಮಹಿಂದಾ ರಾಜಪಕ್ಸೆ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಪಕ್ಷದ ಬೆಂಬಲಿಗರು ದೇಶದ ಅನೇಕ ಭಾಗಗಳಲ್ಲಿ, ಸರ್ಕಾರದ ಪರ ಮತ್ತು ವಿರೋಧ ಘರ್ಷಣೆ ನಡೆಸಿದರು. ಅಂದಿನಿಂದ ದೇಶದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಸಾಮೂಹಿಕ ಪ್ರತಿಭಟನೆ ತೀವ್ರಗೊಂಡ ನಂತರ ರಾಜಪಕ್ಸೆ ರಾಜೀನಾಮೆ ನೀಡಿದರು. ತೀವ್ರ ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದ ಜನರು ಹಸಿವಿನಿಂದ ಬಳಲುತ್ತಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹಿಂದಾ ರಾಜಪಕ್ಸೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲು ಒಪ್ಪಿಕೊಂಡಿದ್ದಾರೆ ಎಂದು ಕೊಲಂಬೊ ಪೇಜ್ ವರದಿ ಮಾಡಿದೆ. ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿಗೆ ನನ್ನ ರಾಜೀನಾಮೆಯೊಂದೇ ಪರಿಹಾರವಾಗಿದ್ದರೆ ರಾಜೀನಾಮೆಗೆ ಸಿದ್ಧ ಎಂದು ಮಹಿಂದಾ ರಾಜಪಕ್ಸೆ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.