ಲಕ್ನೋ (ವಿಶ್ವ ಕನ್ನಡಿಗ ನ್ಯೂಸ್) : ಉತ್ತರಪ್ರದೇಶದ ಮದರಸಾಗಳಲ್ಲಿ ತರಗತಿಗಳು ಪ್ರಾರಂಭವಾಗುವ ಮೊದಲು ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಹಾಡಬೇಕು ಎಂಬ ಆದೇಶವನ್ನು ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿದೆ. ಉತ್ತರ ಪ್ರದೇಶದ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಈ ಆದೇಶವನ್ನು ಹೊರಡಿಸಿದ್ದಾರೆ.
ಮಾರ್ಚ್ 24 ರಂದು ಯುಪಿ ಮದರಸಾ ಶಿಕ್ಷಣ ಮಂಡಳಿಯ ಸಭೆಯಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಆದೇಶವನ್ನು ಮೇ 9 ರಂದು ಹೊರಡಿಸಲಾಗಿದೆ. ಅದರಂತೆ, ಈ ಹಿಂದೆ ಹಾಡುತ್ತಿದ್ದ ಧಾರ್ಮಿಕ ಪ್ರಾರ್ಥನೆಗಳನ್ನು ರಾಷ್ಟ್ರಗೀತೆ ‘ಜನ ಗಣ ಮನ’ ದೊಂದಿಗೆ ಮದರಸಾಗಳಲ್ಲಿ ಮುಂದುವರಿಸಲು ಅನುಮತಿಸಲಾಗಿದೆ.
ಈ ಆದೇಶವು ಎಲ್ಲಾ ಮಾನ್ಯತೆ ಪಡೆದ, ಅನುದಾನಿತ ಮತ್ತು ಅನುದಾನರಹಿತ ಮದರಸಾಗಳಿಗೆ ಅನ್ವಯಿಸುತ್ತದೆ. 2017 ರಲ್ಲಿ, ಯುಪಿ ಮದ್ರಸಾ ಮಂಡಳಿ ಸ್ವಾತಂತ್ರ್ಯ ದಿನದಂದು ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಡುವುದು ಮತ್ತು ರಾಷ್ಟ್ರಧ್ವಜವನ್ನು ಹಾರಿಸುವುದನ್ನು ಕಡ್ಡಾಯಗೊಳಿಸಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.