ಶ್ರೀನಿವಾಸಪುರ (ವಿಶ್ವಕನ್ನಡಿಗ ನ್ಯೂಸ್) : ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡುವುದು ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಡಾ . ವೈ.ಎ.ನಾರಾಯಣಸ್ವಾಮಿ ಹೇಳಿದರು.
ತಾಲ್ಲೂಕಿನಲ್ಲಿ ಮಾವಿನ ಫಸಲು ನಷ್ಟ ಉಂಟಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಕಾ ಗೋಷ್ಠಿಯಲ್ಲಿ ಮಾತನಾಡಿ , ಈ ಬಾರಿ ಶೇ .30 ರಷ್ಟು ಮಾವಿನ ಫಸಲು ಬಂದಿತ್ತು. ಮಳೆಯೊಂದಿಗೆ ಸುರಿದ ಬಿರುಗಾಳಿ ಹಾಗೂ ಆಲಿಕಲ್ಲಿನ ಹೊಡೆತಕ್ಕೆ ಸಿಕ್ಕಿ ಫಸಲು ಪೂರ್ಣ ಪ್ರಮಾಣದಲ್ಲಿ ಹಾಳಾಗಿದೆ ಎಂದು ಹೇಳಿದರು .
ನಷ್ಟದ ಪ್ರಮಾಣ ಹೆಚ್ಚಾಗಿರುವುದರಿಂದ ಪ್ರಸ್ತುತ ಇರುವ ನಷ್ಟ ಪರಿಹಾರ ನಿಯಮಗಳನ್ನು ಬದಿಗೆ ಸರಿಸಿ ಎಕರೆಯೊಂದಕ್ಕೆ ಕನಿಷ್ಠ ರೂ .25 ಸಾವಿರ ನೀಡುವಂತೆ ಮುಖ್ಯ ಮಂತ್ರಿಯ ಮನವೊಲಿಸಲಾ ಗುವುದು ಎಂದು ಹೇಳಿದರು . ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಹಾಗೂ ಉಪನ್ಯಾಸಕರ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು . ಪಿಎಸ್ಐ ನೇಮಕಾ ತಿಯಲ್ಲಿ ಅಕ್ರಮ ಎಸಗಿರುವ ವ್ಯಕ್ತಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದು ಎಂದು ಹೇಳಿದರು .
ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಅಶೋಕರೆಡ್ಡಿ , ಪುರಸಭೆ ನಾಮಿನಿ ಸದಸ್ಯ ಶೇಖ್ ಷಫಿವುಲ್ಲಾ , ರಾಮಾಂಜಿ , ರಮೇಶ್ , ಸುರೇಶ್ ನಾಯಕ್ , ಕೆ.ವಿ.ಕುಮಾರ್ ಇದ್ದರು .
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.