ವಿಶ್ವ ಕನ್ನಡಿಗ ನ್ಯೂಸ್ (ಚಿಕ್ಕಬಳ್ಳಾಪುರ): ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕುರುಬೂರಿನ ನವೋದಯ ಶಾಲೆಯು 1987 ರಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸ್ಥಾಪನೆಯಾಗಿದೆ. ಸತತವಾಗಿ SSLC ಯಲ್ಲಿ ಶೇ100% ಫಲಿತಾಂಶದೊಂದಿಗೆ ಈ 2021-2022 ಸಾಲಿನಲ್ಲಿಯೂ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳನ್ನು ಪಡೆದು ಶೇ100 % ಫಲಿತಾಂಶ ಪಡೆದು ಪೋಷಕರಿಗೆ , ಶಿಕ್ಷಕರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಬಗ್ಗೆ ಮಾತನಾಡಿದ ಸಮಾಜ ಸೇವಕರು ಹಾಗೂ ಶಿಕ್ಷಣ ಸಂಸ್ಥೆಯ ಸಾರಥಿಗಳಾದ ಕುರುಬೂರು ಶಂಕರೇಗೌಡ ರವರು ಮಾತನಾಡಿ “ನವೋದಯ ವಿದ್ಯಾ ಸಂಸ್ಥೆಯಲ್ಲಿನ ಎಸ್.ಎಸ್.ಎಲ್.ಸಿ ಮಕ್ಕಳ ಸಾಧನೆ, ಶಿಕ್ಷಕರ ನಿರಂತರ ಪರಿಶ್ರಮದ ಫ್ರತಿಪಲವಾಗಿ ನೂರಕ್ಕೆ ನೂರರಷ್ಟು ಫಲಿತಾಂಶ ಬರುವುದಕ್ಕೆ ಮೂಲ ಕಾರಣರಾಗಿದ್ದಾರೆ. ಎಲ್ಲಾ ಮಕ್ಕಳಿಗೆ, ಪೋಷಕರಿಗೆ, ಮಕ್ಕಳಿಗೆ ಶಿಕ್ಷಣ ಸಂಸ್ಥೆಯ ಪರವಾಗಿ ಹೃದಯಪೂರ್ವಕ ಧನ್ಯವಾದಗಳು” ಎಂದಿದ್ದಾರೆ.
ನಾವೆಲ್ಲರೂ ಅಭಿನಂದನೆಗಳನ್ನು ಸಲ್ಲಿಸೋಣ ಹಾಗೆಯೇ ಅವರ ಮುಂದಿನ ಭವಿಷ್ಯ ಉಜ್ವಲವಾಗಲೆಂದು ಹಾರೈಸೋಣ. ಪರೀಕ್ಷೆ ಬರೆದ ಒಟ್ಟು ವಿದ್ಯಾರ್ಥಿಗಳು -35.
22 students A+
09 students A
03 students B+
01 students B
ಈ 35 ವಿದ್ಯಾರ್ಥಿಗಳಲ್ಲಿ
10 ವಿದ್ಯಾರ್ಥಿಗಳು Social ವಿಷಯದಲ್ಲಿ 100/100 ಅಂಕ
8 ವಿದ್ಯಾರ್ಥಿಗಳು maths ವಿಷಯದಲ್ಲಿ 100/100ಅಂಕ
2 ವಿದ್ಯಾರ್ಥಿಗಳು science ವಿಷಯದಲ್ಲಿ 100/100ಅಂಕ
2 ವಿದ್ಯಾರ್ಥಿಗಳು Hindi ವಿಷಯದಲ್ಲಿ 100/100 ಅಂಕ ಗಳಿಸಿದ್ದಾರೆ.
ಉಳಿದ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ /ಉತ್ತಮ ಶ್ರೇಣಿಯಲ್ಲಿ ಸಾಧನೆ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳು ಸಂಪೂರ್ಣ ಗ್ರಾಮೀಣ ಪ್ರದೇಶದ ರೈತರ, ಕೂಲಿಕಾರ್ಮಿಕರ ಮಕ್ಕಳು ಇಂತಹ ಸಾಧನೆ ತಂದುಕೊಟ್ಟಿರುವುದಕ್ಕೆ ಮತ್ತೊಮ್ಮೆ ಹೃದಯಪೂರ್ವಕ ಅಭಿನಂದನೆಗಳು.
ಸಂದರ್ಭದಲ್ಲಿ ನವೋದಯ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು, ಆಡಳಿತ ಮಂಡಳಿ ಶುಭಾಶಯ ಅರ್ಪಿಸಿದ್ದಾರೆ.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.