(ವಿಶ್ವ ಕನ್ನಡಿಗ ನ್ಯೂಸ್) : ಇತಿಹಾಸವನ್ನು ಬದಲಾಯಿಸುವ ಅವಕಾಶ ಆರ್ಸಿಬಿ ತಂಡಕ್ಕೆ ಒದಗಿ ಬಂದಿದ್ದು, ಈ ಬಾರಿಯ ಐಪಿಎಲ್ ಟ್ರೋಫಿ ಆರ್ಸಿಬಿ ಗೆಲ್ಲಬೇಕೆಂದು ಸುರೇಶ್ ರೈನಾ ತಮ್ಮ ಮನದಾಸೆ ವ್ಯಕ್ತಪಡಿಸಿದ್ದಾರೆ.
ಈ ವರ್ಷ ಆರ್ಸಿಬಿ ಐಪಿಎಲ್ ಟ್ರೋಫಿ ಗೆಲ್ಲಬೇಕು ಎಂದು ನಾನು ಬಯಸುತ್ತೇನೆ. ಐಪಿಎಲ್ 2022 ಪ್ರಶಸ್ತಿಯನ್ನು ಆರ್ಸಿಬಿ ವಿರಾಟ್ ಕೊಹ್ಲಿಗಾಗಿ ಗೆಲ್ಲಬೇಕಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಲ್ಲಿಯವರೆಗೆ ಐಪಿಎಲ್ ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ ಟ್ರೋಫಿ ಗೆಲ್ಲುವ ಮೂಲಕ ಇತಿಹಾಸ ರಚಿಸುವ ಅವಕಾಶ ಕೂಡಾ ತಂಡಕ್ಕಿದೆ ಎಂದು ಸುರೇಶ್ ರೈನಾ ಹೇಳಿದ್ದಾರೆ. .
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.