ಮಗು ಆಟವಾಡುತ್ತಿದ್ದಾಗ ಮಳೆಯಲ್ಲಿ ನೆನೆದ ಗೋಡೆ ಕುಸಿದು ಬಿದ್ದಿತ್ತು..
ಇಡುಕ್ಕಿ (ವಿಶ್ವ ಕನ್ನಡಿಗ ನ್ಯೂಸ್) : ಮನೆಯ ಗೋಡೆ ಕುಸಿದು ನಾಲ್ಕು ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಕೇರಳದ ತೋಡುಪುಳದ ಕರಿಮಣ್ಣೂರ್ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ರಿಯಾನ್ ಜಾರ್ಜ್ ಎಂದು ಗುರುತಿಸಲಾಗಿದೆ.
ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ರಿಯಾನ್ ತನ್ನ ಹಳೆಯ ಮನೆಯ ಮೇಲ್ಛಾವಣಿಯಲ್ಲಿ ಆಟ ಆಡುತ್ತಿದ್ದಾಗ ಮಳೆಯಲ್ಲಿ ನೆನೆದ ಗೋಡೆ ಕುಸಿದುಬಿತ್ತು. ಮಗುವನ್ನು ತಕ್ಷಣವೇ ತೋಡುಪುಝಾದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವನ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.