ತಿರುವನಂತಪುರಂ (ವಿಶ್ವ ಕನ್ನಡಿಗ ನ್ಯೂಸ್) : ತಿರುವನಂತಪುರದ ಮರಾರಿಮುಟ್ಟಂನಲ್ಲಿ ಖಡ್ಗ ಹಿಡಿದು ಪ್ರತಿಭಟನೆ ನಡೆಸಿದ ದುರ್ಗಾವಾಹಿನಿ ಸಂಘಟನೆಯ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೇ 22 ರಂದು ಮಹಿಳೆಯರು ವಿಹಿಂಪದ ಅಧ್ಯಯನ ಶಿಬಿರದ ಭಾಗವಾಗಿ ಶಸ್ತ್ರಾಸ್ತ್ರಗಳನ್ನು ಹಿಡಿದು ಜಾಥಾ ನಡೆಸಿದರು. ಅಧ್ಯಯನ ಶಿಬಿರದ ಭಾಗವಾಗಿ ಪೊಲೀಸರು ಪಥ ಸಂಚಲನಕ್ಕೆ ಮಾತ್ರ ಅನುಮತಿ ನೀಡಿದ್ದರು. ಆದಾಗ್ಯೂ, ದುರ್ಗಾ ವಾಹಿನಿ ಸಂಘಟನೆಯ ಮಹಿಳೆಯರು ಖಡ್ಗಗಳೊಂದಿಗೆ ಮೆರವಣಿಗೆ ನಡೆಸಿದ್ದರು.
ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ ಅಡಿಯಲ್ಲಿ ಮತ್ತು ಸಮುದಾಯಗಳ ನಡುವೆ ಧಾರ್ಮಿಕ ದ್ವೇಷವನ್ನು ಉತ್ತೇಜಿಸಲು ಪ್ರಯತ್ನಿಸುತ್ತಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಈಗ ಅವರ ವಿರುದ್ಧ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.