ಶ್ರೀನಿವಾಸಪುರ ( ವಿಶ್ವಕನ್ನಡಿಗ ನ್ಯೂಸ್ ) : ಜನರು ತಂಬಾಕು ಪದಾರ್ಥ ಸೇವನೆಯಿಂದ ದೂರವಿರಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ. ಮನು ಹೇಳಿದರು .
ಪಟ್ಟಣದ ಸಾಯಿ ವಿಜಯ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ , ಆರೋಗ್ಯ ಇಲಾಖೆ , ಪೊಲೀಸ್ ಇಲಾಖೆ , ಶಿಕ್ಷಣ ಮತ್ತಿತರ ಇಲಾಖೆಗಳ ವತಿಯಿಂದ ಏರ್ಪಡಿಸಿದ್ದ ವಿಶ್ವ ತಂಬಾಕು ನಿಷೇಧ ದಿನಾಚರಣೆ ಸಮಾರಂಭ ಹಾಗೂ ಕಾನೂನು ಅರಿವು ನೆರವು ಕಾರ್ಯ ಮಾತನಾಡಿದ ಅವರು , ತ೦ಬಾಕು ಸೇವನೆಯಿ೦ದ ಉಂಟಾಗುವ ದುಷರಿಣಾಮಗಳ ಬಗ್ಗೆ ಜನರಿಗೆ ತಿಳಿಸುವುದು ಹಾಗೂ ಜಾಗೃತಿ ಮೂಡಿಸುವುದು ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಉದ್ದೇಶವಾಗಿದೆ ಎಂದು ಹೇಳಿದರು .
ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ಮಾತನಾಡಿ , ಪೋಷಕರು ತಂಬಾಕು ಪದಾರ್ಥಗಳನ್ನು ಮಕ್ಕಳಿಂದ ತರಿಸಿಕೊಳ್ಳಬಾರದು . ಹಾಗೆ ಮಾಡುವುದರಿಂದ ಮಕ್ಕಳು ತಂಬಾಕು ವ್ಯಸನಿಗಳಾಗುವ ಅಪಾಯವಿದೆ . ಆರೋಗ್ಯ ರಕ್ಷಣೆ ಎಲ್ಲರ ಹೊಣೆ , ಮಕ್ಕಳ ಚಲನ ವಲನದ ಬಗ್ಗೆ ಪೋಷಕರು ನಿಗಾವಹಿಸಬೇಕು ಎಂದು ಹೇಳಿದರು .
ತಂಬಾಕು ಸೇವನೆಯ ದುಷ್ಪರಿಣಾಮ ಕುರಿತು ಆಂಜಾಲಮ್ಮ , ತಂಬಾಕು ಸೇವನೆ ನಿವಾರಣೋಪಾಯಗಳ ಬಗ್ಗೆ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ , ತಂಬಾಕು ಸೇವನೆ ನಿಷೇಧ ಕಾಯ್ದೆ ಕುರಿತು ವಕೀಲ ಶ್ರೀನಿವಾಸಗೌಡ ಉಪನ್ಯಾಸ ನೀಡಿದರು . ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು .
ಜೆಎಂಎಫ್ಸಿ ನ್ಯಾಯಾಲಯದ ಅಪರ ಸಿವಿಲ್ ನ್ಯಾಯಾಧೀಶ ಎಚ್.ಆರ್.ಸಚಿನ್ , ಸಹಾಯಕ ಸರ್ಕಾರಿ ಅಭಿಯೋಜಕ ಮುಕುಂದ , ತಾಲ್ಲೂಕು ಆರೋಗ್ಯಾಧಿಕಾರಿ ಎಂ.ಸಿ.ವಿಜಯ , ಪ್ರಾಂಶುಪಾಲ ಕೆ.ಎನ್ . ರಾಮಾಂಜನೇಯ , ವಕೀಲರಾದ ರಾಜಗೋಪಾಲರೆಡ್ಡಿ , ಟಿ.ವೆಂಕಟೇಶ್ , ವಿ.ಅರ್ಜುನ್ , ಎನ್.ವಿ.ಜಯರಾಮೇಗೌಡ ಇದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.