ಮೃತರನ್ನು ಜಹಾಂಗೀರ್ ಆಲಂ ಎಂದು ಗುರುತಿಸಲಾಗಿದೆ..
ಬಿಹಾರ (ವಿಶ್ವ ಕನ್ನಡಿಗ ನ್ಯೂಸ್) : ಬಿಹಾರದ ಗೋಪಾಲ್ಗಂಜ್ ಜಿಲ್ಲೆಯಲ್ಲಿ ಬೆಳಿಗ್ಗೆ ವಾಯುವಿಹಾರಕ್ಕೆಂದು ಹೊರಟಿದ್ದಾಗ ಜಹಾಂಗೀರ್ ಆಲಂ ಎಂಬ ಯುವಕನನ್ನು ಕಳ್ಳತನದ ಆರೋಪದ ಮೇಲೆ ಸ್ಥಳೀಯರು ವಿದ್ಯುತ್ ಕಂಬಕ್ಕೆ ಕಟ್ಟಿ ಕ್ರೂರವಾಗಿ ಥಳಿಸಿದ್ದಾರೆ. ಥಳಿತದಿಂದಾಗಿ ಯುವಕ ಸಾವನ್ನಪ್ಪಿದ್ದಾನೆ.
ಜಹಾಂಗೀರ್ ಆಲಂ ಕುಟುಂಬವು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಯುವಕನನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಜಹಾಂಗೀರ್ ಆಲಂನ ತಂದೆ ಸಫೀವುಲ್ಲಾ ಅನ್ಸಾರಿ, ತನ್ನ ಗ್ರಾಮದ ರಿಜ್ವಾನ್, ಇಮ್ರಾನ್ ಮತ್ತು ಇರ್ಫಾನ್ ಸೇರಿದಂತೆ 12 ರಿಂದ 15 ಜನರು ತಮ್ಮ ಮಗನನ್ನು ಥಳಿಸಿ ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.