ಬಿಜೆಪಿ ವಕ್ತಾರೆಯ ಮಾತುಗಳು ವಿಶ್ವದಲ್ಲೇ ಭಾರತದ ಪ್ರತಿಷ್ಠೆಯನ್ನು ಹಾಳುಮಾಡಿದವು..
ಮುಂಬೈ (ವಿಶ್ವ ಕನ್ನಡಿಗ ನ್ಯೂಸ್) : ದೇಶದಲ್ಲಿ ಹಣದುಬ್ಬರ ಏರಿಕೆಯಾಗಿ, ರೂಪಾಯಿ ಮೌಲ್ಯ ಕುಸಿಯುತ್ತಿದೆ, ಆದರೂ ಬಿಜೆಪಿ ಯಾವ ಮಸೀದಿಯ ಕೆಳಗೆ ಶಿವಲಿಂಗ ಇದೆ ಎಂದು ಹುಡುಕುತ್ತಿದೆ. ಪ್ರವಾದಿಯವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯಿಂದಾಗಿ ಭಾರತ ಮುಜುಗರ ಅನುಭವಿಸುವಂತಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮುಂಬೈ ಹೊರವಲಯದಲ್ಲಿ ನಡೆದ ರ್ಯಾಲಿಯೊಂದರಲ್ಲಿ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನುಪೂರ್ ಶರ್ಮಾ ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದು, ಮುಸ್ಲಿಂ ರಾಷ್ಟ್ರಗಳು ಭಾರತ ಕ್ಷಮೆ ಕೋರುವಂತೆ ಒತ್ತಾಯಿಸಿವೆ. ಇದಕ್ಕೆ ಬಿಜೆಪಿಯೇ ಕಾರಣ ಹೊರತು ದೇಶವಲ್ಲ ಎಂದು ಅವರು ಹೇಳಿದರು.
ಬಿಜೆಪಿ ವಕ್ತಾರರು ಇಲ್ಲವೇ ಬಿಜೆಪಿಯವರು ಹೇಳುವ ಮಾತುಗಳು ಭಾರತದ ನಿಲುವಾಗಲು ಸಾಧ್ಯವಿಲ್ಲ. ಬಿಜೆಪಿ ವಕ್ತಾರರು ಪ್ರವಾದಿಯವರ ಬಗ್ಗೆ ಬಳಸಿದ ಮಾತುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರತಿಷ್ಠೆಯನ್ನು ಹಾಳುಮಾಡಿದವು. ಇದು ನನ್ನ ದೇಶದ ಹಿರಿಮೆಗೆ ಧಕ್ಕೆ ತಂದಿದೆಯೇ ಹೊರತು ಬಿಜೆಪಿಯದ್ದಲ್ಲ ಎಂದು ಉದ್ಧವ್ ಠಾಕ್ರೆ ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.