ಮುಲ್ಕಿ(www.vknews.in)
ಮುಲ್ಕಿ:-ದ.ಕ.ಜಿಲ್ಲಾ ಗೃಹರಕ್ಷಕದಳ ಮೂಲ್ಕಿ ಘಟಕದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ ಮೂಲ್ಕಿ ತಹಶೀಲ್ದಾರ್ ಮಾರ್ಗದರ್ಶನದಲ್ಲಿ ಮೂಲ್ಕಿ ನಗರ ಪಂಚಾಯತ್ ಸಹಕಾರದೊಂದಿಗೆ ಮಳೆಗಾಲದ ಪ್ರವಾಹ ರಕ್ಷಣಾ ತಂಡವು ಮೂಲ್ಕಿ ಶಾಂಭವಿ ನದಿಯಲ್ಲಿ ಇನ್ ಪ್ಲೇ ಟೇಬಲ್ ಬೋಟ್ ಹಾಗೂ, ಬೋಟ್ ಇಂಜಿನ್ ಕಾರ್ಯ ಕ್ಷಮತೆ ಪರೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರವರು ಪ್ರವಾಹ ಸಂದರ್ಭದಲ್ಲಿ ಪಾಲಿಸಬೇಕಾದ ಮುನ್ನಚ್ಚರಿಕೆ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಟಿ. ಜಿ ಗುರುಪ್ರಸಾದ್, ಮೂಲ್ಕಿ ಹೋಬಳಿ ಕಂದಾಯ ನಿರೀಕ್ಷಕರಾದ ಜಿ. ಎಸ್ ದಿನೇಶ್, ಸ್ಥಳೀಯ ನಗರ ಪಂಚಾಯತ್ ಸದಸ್ಯೆ ದಯಾವತಿ, ಗ್ರಹ ರಕ್ಷಕ ದಳದ ಪ್ರಭಾರ ಘಟಕಾಧಿಕಾರಿ ಲೋಕೇಶ್ ಚಿತ್ರಾಪು , ಪ್ರವಾಹ ರಕ್ಷಣಾ ತಂಡದ ಸದಸ್ಯರು, ಹಾಗೂ ಗ್ರಹರಕ್ಷಕ ದಳದ ಸಿಬ್ಬಂದಿಗಳು ಭಾಗವಹಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.