ಮುಂಬೈ (ವಿಶ್ವ ಕನ್ನಡಿಗ ನ್ಯೂಸ್) : ಮಹಾರಾಷ್ಟ್ರದ ಭಿವಾಂಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್(ಸ.ಅ)ರವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದನು.
ಇದಕ್ಕೆ ಪ್ರತಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾದ್ ಅನ್ಸಾರಿ ಎಂಬ ಎಂಜಿನಿಯರಿಂಗ್ ವಿದ್ಯಾರ್ಥಿ ಸಾಮಾಜಿಕ ಮಾಧ್ಯಮದಲ್ಲಿ ನೂಪುರ್ ಶರ್ಮಾ ಅವರ ಹೇಳಿಕೆಯನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದನು. ಧರ್ಮ ನಿಂದನೆ ಆರೋಪದ ಮೇಲೆ ಅವನನ್ನು ಬಂಧಿಸಿ ಸೆಕ್ಷನ್ 153-ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಯೋಗೇಶ್ ಚವಾಣ್ ಹೇಳಿದ್ದಾರೆ.
ಧರ್ಮ, ಭಾಷೆ ಅಥವಾ ಜನಾಂಗದ ಆಧಾರದ ಮೇಲೆ ದ್ವೇಷವನ್ನು ಹರಡಲು ಪ್ರಯತ್ನಿಸುವವರ ಮೇಲೆ ಈ ಸೆಕ್ಷನ್ ಹೇರಲಾಗಿದೆ. ಇದರಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡದೊಂದಿಗೆ ಶಿಕ್ಷಿಸಬಹುದು. ಸ್ಥಳೀಯರ ಪ್ರಕಾರ ಈತನು ಯಾವುದೇ ನಿರ್ದಿಷ್ಟ ಧರ್ಮವನ್ನು ನಂಬುವುದಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.