ಬೆಂಗಳೂರು (www.vknews.in) : ಕರ್ನಾಟಕದಲ್ಲಿ ಕೋವಿಡ್ ದಿಡೀರ್ ಏರಿಕೆಕಂಡ ಕಾರಣ ಆರೋಗ್ಯ ಸಚಿವ ಡಾ.ಸುಧಾಕರ್ ಅವರ ನೇತೃತ್ವದಲ್ಲಿಂದು ಕೋವಿಡ್ ತಾಂತ್ರಿಕ ಸಮಿತಿಯ ಸಭೆ ನಡೆಯಲಿದೆ. ಸಭೆಯಲ್ಲಿ ತಜ್ಞರು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ಕೋವಿಡ್ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ಸದ್ಯ ಪಾಸಿಟಿವಿಟಿ ದರ ಎರಡಕ್ಕಿಂತಲೂ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಇತರ ಕಠಿಣ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.
ಕೋವಿಡ್ ವೈರಸ್ ಸೋಂಕಿನ ನಾಲ್ಕನೇ ಅಲೆ ಜುಲೈ ತಿಂಗಳಲ್ಲಿ ಹೆಚ್ಚು ಬಾಧಿಸುವ ಕುರಿತು ಈ ಹಿಂದೆಯೇ ಆರೋಗ್ಯ ಇಲಾಖೆ ಸೂಚನೆಯನ್ನು ನೀಡಿತ್ತು. ಇದೀಗ ರಾಜ್ಯದಲ್ಲಿ ಪಾಸಿಟಿವಿಟಿ ದರ ಕೂಡ ದಿನೇ ದಿನೇ ಏರಿಕೆಯಾಗುತ್ತಿದೆ. ಕಳೆದ ಎರಡು ವರ್ಷಗಳ ನಂತರದಲ್ಲಿ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ಸೇರಿದಂತೆ ಎಲ್ಲಾ ಚಟುವಟಿಕೆಗಳು ಸಹಜ ಸ್ಥಿತಿ ಮರಳಿವೆ. ಈ ನಡುವಲ್ಲೇ ಕೋವಿಡ್ ಸೋಂಕು ಹೆಚ್ಚುತ್ತಿರುವುದು ಸಹಜವಾಗಿಯೇ ಆತಂಕಕ್ಕೆ ಕಾರಣವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.