ಚೆನ್ನೈ (www.vknews.in) : ತಮಿಳುನಾಡಿನ ಪಪ್ಪರಪಟ್ಟಿಯಲ್ಲಿರುವ ಜನಪ್ರಿಯ ದೇವಸ್ಥಾನದ ಬೃಹತ್ ರಥ ಸೋಮವಾರ ಮಗುಚಿ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಧರ್ಮಪುರಿ ಜಿಲ್ಲೆಯ ಸಿ ಮನೋಹರನ್ (57) ಮತ್ತು ಜಿ ಸರವಣನ್ (50) ಎಂದು ಗುರುತಿಸಲಾಗಿದೆ.
ವೈಕಾಶಿ ಹಬ್ಬದ ಅಂಗವಾಗಿ ಕಾಳಿಯಮ್ಮನ ದೇವಸ್ಥಾನದ ಅಲಂಕೃತ ರಥವನ್ನು ಪೂಜಾ ಸ್ಥಳದ ಬಳಿಯ ಪ್ರಮುಖ ಬೀದಿಗಳಲ್ಲಿ ಎಳೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.