ಬೆಳ್ಳಾರೆ (www.vknews.in) : ಕಲ್ಮಡ್ಕ ಗ್ರಾಮದ ಕಲ್ಲೇರಿಯಲ್ಲಿ ಪುತ್ತೂರು-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಳೆದ ಬಾರಿಯ ಸರ್ಕಾರದಿಂದ ಮಂಜೂರಾದ ಹಣದಿಂದ ನಿರ್ಮಿಸಿದ ಸೇತುವೆಯ ಉದ್ಘಾಟನೆಯನ್ನು ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಿದ ಬಿಜೆಪಿ ನಡೆಯನ್ನು ಎಸ್ಡಿಪಿಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷರಾದ ಹಮೀದ್ ಮರಕ್ಕಡ ಖಂಡಿಸಿದ್ದಾರೆ.
ಉದ್ಘಾಟನೆಯ ಸಮಯದಲ್ಲಿ ಬಿಜೆಪಿ ಪಕ್ಷದ ಧ್ವಜ ಹಿಡಿದುಕೊಂಡು ಸ್ಥಳೀಯ ಪಂಚಾಯತ್ ಸದಸ್ಯರನ್ನು ಕಡೆಗಣಿಸಿ ಯಾವುದೇ ಪ್ರೋಟೋಕಾಲ್ ನಿಯಮ ಪಾಲನೆ ಮಾಡದೆ ಸರ್ಕಾರಿ ಹಣದಿಂದ ಮಾಡಿದ ಕೆಲಸವನ್ನು ಬಿಜೆಪಿ ಪಕ್ಷದಿಂದ ಹಣ ಬಿಡುಗಡೆ ಮಾಡಿದ ರೀತಿಯಲ್ಲಿ ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮಾಡಿದ್ದು ಕಾನೂನು ವಿರೋಧಿ ಕೃತ್ಯವಾಗಿದೆ.
ಸೇತುವೆ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಅಂಗಾರರು ಕೂಡ ಇದರ ಬಗ್ಗೆ ತುಟಿ ಬಿಚ್ಚದೆ ಮೌನ ಸಮ್ಮತಿ ನೀಡಿದ್ದು ಖಂಡನಾರ್ಹವಾಗಿದೆ.ಈ ದಿನದವರಗೆ ಧ್ವಜವನ್ನು ತೆರವುಗೊಳಿಸಲ್ಲಿಲ್ಲ. ಸಂಬಂದ ಪಟ್ಟ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.