ದೋಹಾ, ಕತಾರ್ (ವಿಶ್ವ ಕನ್ನಡಿಗ ನ್ಯೂಸ್) : ಕರ್ನಾಟಕ ಸಂಘ ಕತಾರ್ ನ ಆಡಳಿತ ಮಂಡಳಿ ಹಾಗೂ ಸಲಹಾ ಸಮಿತಿಯು “ಬಾಸ್ಕೆಟ್ ಬಾಲ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷರು, ಬಾಸ್ಕೆಟ್ ಬಾಲ್ ಫೆಡರೇಷನ್ ಆಫ್ ಕರ್ನಾಟಕದ ಅಧ್ಯಕ್ಷರು, ಫೆನ್ಸಿಂಗ್ ಫೆಡರೇಷನ್ ಆಫ್ ಕರ್ನಾಟಕದ ಅಧ್ಯಕ್ಷರು, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ನ ಉಪಾಧ್ಯಕ್ಷರು, ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ನ ಅಧ್ಯಕ್ಷರು, ಕರ್ನಾಟಕ ಲೆಜಿಸ್ಲೇಟಿವ್ ಕೌನ್ಸಿಲ್ ನ ವಿರೋಧ ಪಕ್ಷದ ಉಪನಾಯಕರು ಆದ ಗೌರವಾನ್ವಿತ ಶ್ರೀ ಕೆ ಗೋವಿಂದರಾಜ್, ಮತ್ತು ಶ್ರೀ ದಯಾನಂದ್ (ಭಾರತೀಯ ಪೊಲೀಸ್ ಸೇವೆ), ಕರ್ನಾಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಅವರಿಗೆ ಭಾರತೀಯ ಕ್ರೀಡಾ ಕೇಂದ್ರವು ೧೩ ಜೂನ್ ೨೦೨೨ ರಂದು ಆಯೋಜಿಸಿದ್ದ ಸ್ವಾಗತ ಹಾಗೂ ಔತಣ ಕೂಟದಲ್ಲಿ ಗೌರವಿಸಿ ಸನ್ಮಾನಿಸಿತು.
ಭಾರತದ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡವು ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲು ದೋಹಾ ಗೆ ಭೇಟಿ ನೀಡಿದ ಸಮಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗೌರವಿಸುವ ಈ ಅವಕಾಶವನ್ನು ನೀಡಿದ್ದಕ್ಕಾಗಿ ಕರ್ನಾಟಕ ಸಂಘ ಕತಾರ್ ಆಡಳಿತ ಮಂಡಳಿಯು ಭಾರತೀಯ ಕ್ರೀಡಾ ಕೇಂದ್ರಕ್ಕೆ ಧನ್ಯವಾದಗಳನ್ನು ತಿಳಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.