ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್): ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಮಾಜದಲ್ಲಿರುವ ಎಲ್ಲಾ ವರ್ಗಗಳಿಗೆ ತನ್ನ ಕೈಯಲ್ಲಿ ಆಗುವ ಸಹಾಯವನ್ನು ಮಾಡುತ್ತಾ ಜನಪ್ರಿಯಗೊಂಡಿರುವ ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಅವರಿಗೆ ಕ್ಷೇತ್ರದ ಜನರು ಅದ್ದೂರಿಯಾಗಿ ಸ್ವಾಗತಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗೊಲ್ಲಹಳ್ಳಿ ಗ್ರಾಮ ಪಂಚಾಯತಿಯ ನಾಸ್ತಿಮ್ಮನಹಳಿ ಗ್ರಾಮದಲ್ಲಿ ಆಯೋಜಿಸಿದ ನಮ್ಮ ನಡೆ ಜನರ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಅವರಿಗೆ ಗ್ರಾಮಸ್ಥರು ಮನೆಯ ಮಗನಂತೆ ಅದ್ಧೂರಿಯಾಗಿ ಸ್ವಾಗತಿಸಿದರು.
ಇದೇ ವೇಳೆಯಲ್ಲಿ ಗ್ರಾಮದ ಹಿರಿಯರು ಕಿರಿಯರಿಗೆ ಮುಕ್ತವಾಗಿ ಸಮಾಲೋಚನೆ ನಡೆಸಿದ ವಿನಯ್ ಎನ್ ಶ್ಯಾಮ್ ಅವರು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿ ಮುಂಬರುವ ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ವಿನಂತಿಸಿದರು.
ಮಾಜಿ ಶಾಸಕಿ ಅನುಸೂಯಮ್ಮ ಮಾತನಾಡಿ ಕ್ಷೇತ್ರದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಅವರಿಗೆ ಎಲ್ಲಾ ರೀತಿಯ ಸಹಕಾರ ಮತ್ತು ಬೆಂಬಲವನ್ನು ನೀಡಬೇಕೆಂದು ಗ್ರಾಮಸ್ಥರಿಗೆ ಮನವಿ ಮಾಡಿ ಮುಂದಿನ ಚುನಾವಣೆಯಲ್ಲಿ ಇವರಿಗೆ ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ತಾವು ಈ ಕ್ಷೇತ್ರದ ಶಾಸಕಿಯಾಗಿ ಈ ಭಾಗದ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಿದ್ದೇನೆ ಅದೇ ರೀತಿಯಲ್ಲಿ ಕೆಪಿಸಿಸಿ ಸದಸ್ಯ ಹಾಗೂ ಯುವ ಮುಖಂಡರಾಗಿರುವ ವಿನಯ್ ಅವರು ಸಹ ತಮ್ಮ ಕಷ್ಟಗಳಿಗೆ ಸ್ಪಂದಿಸುವ ಜೊತೆಗೆ ಸದಾ ತಮ್ಮೊಂದಿಗೆ ಇರುತ್ತಾರೆ ಅವರಿಗೆ ತಮ್ಮ ಮನೆಯ ಮಗನಾಗಿ ಪ್ರೀತಿಸಿ ಘೋಷಿಸಬೇಕೆಂದು ಕೋರಿದರು ಇದಕ್ಕೆ ಗ್ರಾಮಸ್ಥರು ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿ ವಾಗ್ದಾನ ಮಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗ ನಾರಾಯಣಸ್ವಾಮಿ, ಕಾಂಗ್ರೆಸ್ ಹಿರಿಯ ಮುಖಂಡ ವಕೀಲ ನಾರಾಯಣಸ್ವಾಮಿ,ಮಾಜಿ ಜಿಪಂ ಸದಸ್ಯೆ ನಾರಾಯಣಮ್ಮ,ಮಂಗಳ ಪ್ರಕಾಶ್,ಮಹಿಳಾ ನಾಯಕಿ ಶಾಂತಿ,ಕಲಾವತಿ, ಶಾಹೀನ,ಲಕ್ಷ್ಮಣ್, ಸತೀಶ್, ಮಹೇಂದ್ರ ಗಜೇಂದ್ರ, ನಾಗೇಶ್, ಹರೀಶ್, ಸಂತೋಷ್, ಮಧುಸ್ವಾಮಿ ಹಾಗೂ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ವರದಿ ತೇ.ಮೀಂ.ಅನ್ಸಾರಿ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.