(www.vknews.in) : ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಮ್ ಹೂಡೆಯಿಂದ ರಕ್ತದಾನ ಶಿಬಿರವು ಹೂಡೆಯ ಉರ್ದು ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಎಸ್.ಡಿ.ಪಿ.ಐ. ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಬಿ.ಎನ್ ಶಾಹಿದ್ ಆಲಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಮಾಜ ಸೇವಕ ಫತಾವುಲ್ಲಾ ತೋನ್ಸೆ, ಪಿ.ಎಫ್.ಐ. ಉಡುಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಅಬ್ದುಲ್ ಶುಕೂರ್ ಮಲ್ಪೆ, ಗ್ರಾಮಪಂಚಾಯತ್ ಸದಸ್ಯರಾದ ಹೈದರ್ ಆಲಿ, ಡಾ. ಫಹೀಮ್, ಕೆ ಎಮ್.ಸಿ. ಮಣಿಪಾಲ್ ಬ್ಲಡ್ ಬ್ಯಾಂಕ್ ನ ವೈದ್ಯಾಧಿಕಾರಿ ಡಾ.ಭೀಮಾ ರವರು ಮಾತನಾಡಿದರು.
ಮುಖ್ತಾರ್ ತೋನ್ಸೆ ಸ್ವಾಗತಿಸಿದರು. ಜಿ.ಇಮ್ತಿಯಾಜ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶಿಬಿರದಲ್ಲಿ 57ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.