ಕಾರ್ಕಳ (www.vknews.in) : ಕಾರ್ಕಳದ ಎಂಪಿಎಂ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಐಕ್ಯೂಎಸಿ, ವಿದ್ಯಾರ್ಥಿ ವೇದಿಕೆ ಎನ್.ಎಸ್.ಎಸ್, ರೆಡ್ ಕ್ರಾಸ್ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಾಝಿಯಾರವರು ಪ್ರತಿದಿನ ಯೋಗಾಭ್ಯಾಸದಿಂದ ಒಂದು ಆರೋಗ್ಯಕರ ಜೀವನಕ್ಕೆ ಅಡಿಪಾಯ ಹಾಕಿದ್ದಂತೆ ದಿನದ 40 ನಿಮಿಷಗಳ ಕಾಲ ಯೋಗಾಭ್ಯಾಸದಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗುತ್ತದೆ. ಯೋಗ ಇಂದಿಗೆ ಮಾತ್ರ ಸೀಮಿತವಾಗದೇ ಪ್ರತಿನಿತ್ಯ ಜೀವನದಲ್ಲಿ ಅಳವಡಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವರ್ಮ ಅಜ್ರಿ ಯೋಗ ದಿನಾಚರಣೆ ಮಹತ್ವದ ಬಗ್ಗೆ ತಿಳಿಸಿ ಇದು ದೈನಂದಿನ ಜೀವನದ ಭಾಗವಾಗಿರಬೇಕು ಎಂದರು. ಕಾಲೇಜಿನ ಉಪನ್ಯಾಸಕರಾದ ಭಾಗ್ಯಲಕ್ಷ್ಮಿ, ಸೌಮ್ಯ, ಕಿರಣ್ ಉಪಸ್ಥಿತರಿದ್ದರು. ವಿದ್ಯಾರ್ಥಿಯಾದ ಶ್ರೀಮಾಲ ನಿರೂಪಿಸಿದರು. ರೆಡ್ ಕ್ರಾಸ್ ವಿಭಾಗದ ಮುಖ್ಯಸ್ಥರಾದ ಮೈತ್ರಿ ಇವರು ಸ್ವಾಗತಿಸಿದರು. ಕ್ರೀಡಾ ವಿಭಾಗದ ಮುಖ್ಯಸ್ಥರಾದ ಮಂಜುನಾಥ್ ವಂದಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.