ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಜಾರ್ಖಂಡ್ನ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಹೆಸರಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪತ್ರಿಕಾಗೋಷ್ಠಿಯಲ್ಲಿ ಈ ಹೆಸರನ್ನು ಘೋಷಿಸಿದರು. ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ವ್ಯಕ್ತಿಯೊಬ್ಬರು ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಅಭ್ಯರ್ಥಿ ಹುದ್ದೆಗೆ 20 ಹೆಸರುಗಳನ್ನು ಚರ್ಚಿಸಲಾಗಿದೆ ಎಂದು ಅವರು ಹೇಳಿದರು.
ಮುರ್ಮು ಅವರನ್ನು ನಿರ್ಧರಿಸುವಲ್ಲಿ ಮಹಿಳಾ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಾತಿನಿಧ್ಯದಂತಹ ಅಂಶಗಳು ನಿರ್ಣಾಯಕವಾಗಿದ್ದವು. ಮುರ್ಮು ಅವರು ಪ್ರತಿಭಾ ಪಾಟೀಲ್ ಅವರ ನಂತರ ಎರಡನೇ ಮಹಿಳಾ ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ.
ದ್ರೌಪದಿ ಮುರ್ಮು ಒಡಿಶಾ ಮೂಲದವರು. ಅವರು ಒಡಿಶಾದ ಮಾಜಿ ಸಚಿವರೂ ಹೌದು. ಬಿಜೆಪಿಯ ಮಾಜಿ ನಾಯಕ ಯಶವಂತ್ ಸಿನ್ಹಾ ಅವರು ವಿರೋಧ ಪಕ್ಷದ ಜಂಟಿ ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.