ಕೆಮ್ಮಾರ(ವಿಶ್ವಕನ್ನಡಿಗ ನ್ಯೂಸ್): ಸ.ಉ.ಹಿ.ಪ್ರಾ.ಶಾಲೆ ಕೆಮ್ಮಾರದಲ್ಲಿ ಗ್ರಾಮಕ್ಕೊಂದು ಮಾದರಿ ಶಾಲೆ ಚಿಂತನ ಮಂಥನ ಕಾರ್ಯಕ್ರಮ ಜೂ.20 ರಂದು ನಡೆಯಿತು.
ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ.ಎಂ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗೈದರು. ಶಾಲೆಯ S.D.M.C ಅಧ್ಯಕ್ಷರಾಗಿರುವ ಶ್ರೀ ಅಬ್ದುಲ್ ಅಝೀಝ್.ಬಿ.ಕೆ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ತನುಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾದರಿ ಶಾಲೆಯ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಮುಖ್ಯ ಅತಿಥಿ ಶ್ರೀಮತಿ ನೀತಮ್ಮ ಮಾಹಿತಿ ನೀಡಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಶೆಟ್ಟಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. S.D.M.C ಉಪಾಧ್ಯಕ್ಷೆ ಶ್ರೀಮತಿ ಸುಮಯ್ಯ, ಸದಸ್ಯರಾದ ಶ್ರೀ ವಾಮನ, ಶ್ರೀ ಪದ್ಮನಾಭ ಶೆಟ್ಟಿ ಹಾಗೂ ಶ್ರೀಮತಿ ಆಯಿಷಾ ಅತಿಥಿಗಳಿಗೆ ಹೂ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಪೋಷಕರು, ಊರವರು ಹಾಗೂ ವಿದ್ಯಾಭಿಮಾನಿಗಳು ಹಾಜರಿದ್ದರು. ಹಿರೆಬಂಡಾಡಿ ಶಾಲೆಯ S.D.M.C ಅಧ್ಯಕ್ಷರು, ಸದಸ್ಯರು ಹಾಗೂ ಮುಖ್ಯ ಶಿಕ್ಷಕ ಶ್ರೀ ಬಾಬು ಮತ್ತು ಅಡೆಕ್ಕಲ್ ಶಾಲೆಯ S.D.M.C ಅಧ್ಯಕ್ಷರು, ಸದಸ್ಯರು ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ಸೆಲೀನಾ ಹಾಜರಿದ್ದರು. ಶಿಕ್ಷಕಿ ಶ್ರೀಮತಿ ಸುಮನಾ.ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮೋಹನಾಂಗಿ ವಂದಿಸಿದರು. ಎಲ್ಲಾ ಸಹ ಶಿಕ್ಷಕರು ಈ ಕಾರ್ಯಕ್ರಮಕ್ಕೆ ಸಹಕರಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.