ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಯುವ ರೆಡ್ಕ್ರಾಸ್, ಎನ್.ಎಸ್.ಎಸ್., ರೇಂಜರ್ಸ್-ರೋವರ್ಸ್, ಕ್ರೀಡಾ ವಿಭಾಗ ಹಾಗೂ ದೇಲಂಪಾಡಿ ಯೋಗ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದಲ್ಲಿ ಡಾ. ಪಿ. ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಮಂಗಳೂರು ಇಲ್ಲಿ ನಡೆಯಿತು.
ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರು ಪ್ರಾತ್ಯಾಕ್ಷಿಕೆಯ ಮೂಲಕ ಯೋಗಾಸನಗಳನ್ನು ಪ್ರದರ್ಶಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಏಕಾಗ್ರತೆಯನ್ನು ಹೆಚ್ಚಿಸುವ ಪ್ರಾಣಾಯಾಮ, ಉತ್ಕಟಾಸನ, ವಜ್ರಾಸನ, ತಾಡಾಸನ ಮುಂತಾದ ಯೋಗಾಸನಗಳನ್ನು ಹೇಳಿಕೊಟ್ಟರು.
ಕಾರ್ಯಕ್ರಮದಲ್ಲಿ ಯುವರೆಡ್ಕ್ರಾಸ್, ಎನ್.ಎಸ್.ಎಸ್., ರೇಂಜರ್ಸ್-ರೋವರ್ಸ್, ಕ್ರೀಡಾ ವಿಭಾಗದ ನಿರ್ದೇಶಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದೀಪ್ತಿ ಕಾರ್ಯಕ್ರಮವನ್ನು ನಿರ್ವಹಿಸಿ, ಸುಶ್ಮಿತಾ ಆರ್ ಸ್ವಾಗತಿಸಿ, ಭಾಗ್ಯಲಕ್ಷ್ಮೀಯವರು ವಂದನಾರ್ಪಣೆಗೈದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.