ಬಿಬಿಎಂಪಿ ಇದು ನಮ್ಮ ಸ್ವತ್ತು ಅಲ್ಲ ಎಂದಿರುವುದು ಸಂತಸ ಎಂದಿದೆ – ಮೌಲಾನಾ ಶಾಫಿ ಸಅದಿ
ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಅನುಮತಿ ನೀಡುವಂತೆ ಸಂಘಪರಿವಾರ ಸಂಘಟನೆಗಳು ಅನುಮತಿ ಕೋರಿದ್ದ ಬಳಿಕ ತೀವ್ರ ವಿವಾದ ಹುಟ್ಟು ಹಾಕಿಕೊಂಡಿದ್ದ ನಗರದ ಚಾಮರಾಜಪೇಟೆ ಈದ್ಗಾ ಮೈದಾನ ವಕ್ಫ್ ಮಂಡಳಿಯದ್ದು, ಅದು ಬಿಬಿಎಂಪಿಗೆ ಸೇರಿದ್ದಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಈ ಮೂಲಕ ಅವರು ಮೈದಾನದ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಬಿಬಿಎಂಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚಾಮರಾಜಪೇಟೆ ಮೈದಾನ ವಿವಾದ ಸಂಬಂಧ 1974ನೇ ಸಾಲಿನಲ್ಲಿ ಸಿಟಿ ಸರ್ವೆ ಪ್ರಕಾರ ನಮ್ಮ ಖಾತೆ ಇದೆ ಎಂದು ಉಲ್ಲೇಖವಾಗಿದೆ. ಮೇಲ್ನೋಟಕ್ಕೆ ಮೈದಾನ ಸ್ವಾಮಿಥ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ ಇಲ್ಲ. ಆದರೆ, ಖಾತಾ ಪ್ರಕಾರ ಮಾಲಿಕತ್ವ ನಮ್ಮದು ಇದೆ. ಇನ್ನೂ, ವಕ್ಫ್ ಬೋರ್ಡ್ ದಾಖಲೆ ಸಮೇತ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಮತ್ತೊಂದೆಡೆ ಇತ್ತೀಚೆಗೆ ವಕ್ಫ್ ಬೋರ್ಡ್ ಮಂಡಳಿ ಮೈದಾನಕ್ಕೆ ಸಂಬಂಧಿಸಿದಂತೆ ಮೈಸೂರು ಆಡಳಿತ ಕಾಲದಿಂದಲೂ ಇದ್ದ ದಾಖಲೆಗಳನ್ನು ಬಿಬಿಎಂಪಿಗೆ ಸಲ್ಲಿಕೆ ಮಾಡಿತ್ತು. ಇದನ್ನು ಬಿಬಿಎಂಪಿ ಕಾನೂನು ವಿಭಾಗ ಪರಿಶೀಲನೆ ನಡೆಸಿ, ಈ ಸ್ವತ್ತು ನಮ್ಮದಲ್ಲ ಎನ್ನುವ ಅಭಿಪ್ರಾಯ ಹೇಳಿತ್ತು ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಅವರು, ಈದ್ಗಾ ಮೈದಾನ ವಿವಾದ ಸಂಬಂಧ ಈಗಾಗಲೇ ನಾವು ಖಾತೆಗಾಗಿ ಬಿಬಿಎಂಪಿಗೆ ಅರ್ಜಿ ಸಲ್ಲಿಕೆ ಮಾಡಿದ್ದೇವೆ. ಇನ್ನೂ, ಬಿಬಿಎಂಪಿ ಇದು ನಮ್ಮ ಸ್ವತ್ತು ಅಲ್ಲ ಎಂದಿರುವುದು ಸಂತಸ ಎಂದಿದೆ ಎಂದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.