ಅವೈಜ್ಙಾನಿಕ ಕಾಮಗಾರಿ ಘಟನೆಗೆ ಕಾರಣ ಸ್ಥಳೀಯರ ಆರೋಪ..
ಸೋಮೇಶ್ವರ ಉಚ್ಚಿಲ (www.vknews.in) : ಕಳೆದೆರಡು ದಿವಸಗಳಿಂದ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಸೋಮೇಶ್ವರ, ಉಚ್ಚಿಲದ ಬಟ್ಟಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಳೆದ ವರ್ಷ ಸಮುದ್ರ ಪಾಲಾಗಿ ಉಳಿದಿದ್ದ ರಸ್ತೆಯು ಸಂಪೂರ್ಣ ಕೊಚ್ಚಿ ಹೋಗಿದೆ.
ಸೋಮೇಶ್ವರ, ಉಚ್ಚಿಲ ಪ್ರದೇಶಗಳು ಕಳೆದ ಐದು ವರುಷಗಳಿಂದಲೂ ಕಡಲ್ಕೊರೆತ ಸಮಸ್ಯೆಯಿಂದ ನಲುಗುತ್ತಿದೆ.ಈ ಪ್ರದೇಶದಲ್ಲಿ ನಡೆದ ಅವೈಜ್ಞಾನಿಕ ಬ್ರೇಕ್ ವಾಟರ್ ಕಾಮಗಾರಿಯು ಯಾವುದೇ ಪರಿಣಾಮ ಬೀರಿಲ್ಲ. ಇದೀಗ ರಸ್ತೆ ಸಮುದ್ರ ಪಾಲಾಗಿದ್ದು, ಇಲ್ಲಿನ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಬಂದರು ಸಚಿವ ಎಸ್.ಅಂಗಾರ ಅವರು ಇಲ್ಲಿಗೆ ಭೇಟಿ ನೀಡಿ ಕಾಸರಗೋಡು ನೆಲ್ಲಿ ಕುನ್ನು ಮಾದರಿಯ ಸೀ ಬ್ರೇಕ್ ವಾಟರ್ ಕಾಮಗಾರಿಯನ್ನ ಇಲ್ಲೂ ನಡೆಸುವ ಬಗ್ಗೆ ಅಧ್ಯಯನ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದರು.
ಸರಕಾರವು ವ್ಯರ್ಥ ಯೋಜನೆಗಳಿಗೆ ಹಣ ಖರ್ಚು ಮಾಡುವ ಬದಲು ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿ ನಡೆಸುವಂತೆ ಸ್ಥಳೀಯ ಮೀನುಗಾರರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಹಾಗೂ ಇನ್ನಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.