ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಶಕ್ತಿನಗರದ ಶಕ್ತಿ ಪಪೂ ಕಾಲೇಜಿನಲ್ಲಿ ದ.ಕ ಪಪೂ ಪ್ರಾಚಾರ್ಯರ ಸಂಘ, ಚಾಣಕ್ಯ ವಿಶ್ವವಿದ್ಯಾನಿಲಯ, ವಿದ್ಯಾ ಭಾರತಿ ಮತ್ತು ಶಕ್ತಿ ಪಪೂ ಕಾಲೇಜಿನ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – 2020ರಲ್ಲಿನ ಅವಕಾಶಗಳು ಮತ್ತು ಸವಾಲುಗಳು ಎಂಬ ಎರಡು ದಿನಗಳ ವಿಚಾರ ಸಂಕೀರಣದ ಉದ್ಘಾಟಣೆಯು ನಡೆಯಿತು.
ರಾಷ್ಟ್ರೀಯ ಶಿಕ್ಷಣ ನೀತಿ – 2020ರ ಪ್ರಮುಖ ಉದ್ದೇಶ ಮಾನವ ಶಕ್ತಿಯ ವೃದ್ಧಿ. ಪ್ರತಿಯೊಬ್ಬನ ಪರಿಣತ ಜ್ಞಾನವು ತೆರೆದು ಕೊಂಡಾಗ ಸಾಮೂಹಿಕ ಪರಿವರ್ತನೆಯಿಂದ ಸಮಾಜ ಪರಿವರ್ತನೆಯಾಗುತ್ತದೆ ಎಂದು ಚಾಣಕ್ಯ ವಿಶ್ವವಿದ್ಯಾನಿಲಯದ ಸ್ಥಾಪಕ ಕುಲಪತಿ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಕರಡು ಸಮಿತಿಯ ಉಪಾಧ್ಯಕ್ಷರಾದ ಎಂ.ಕೆ ಶ್ರೀಧರ್ ಅವರು ನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಡೆದ ‘ರಾಷ್ಟ್ರೀಯ ಶಿಕ್ಷಣ ನೀತಿ – 2020ರಲ್ಲಿನ ಅವಕಾಶಗಳು ಮತ್ತು ಸವಾಲುಗಳು ಎಂಬ ಎರಡು ದಿನಗಳ ಕಾಲ ನಡೆಯಲಿರುವ ಸಮಾರಂಭದಲ್ಲಿ ದಿಕ್ಸೂಚಿ ಭಾಷಣದಲ್ಲಿ ಅಭಿಪ್ರಾಯಪಟ್ಟರು.
ಕಾರ್ಯಗಾರದ ಉದ್ಘಾಟನೆಯನ್ನು ಮಾಡಿ ಚಾಣಕ್ಯ ವಿಶ್ವವಿದ್ಯಾನಿಲಯದ ಕುಲ ಸಚಿವ (ಪರೀಕ್ಷಾಂಗ) ಶ್ರೀ ಸಂದೀಪ್ ನಾಯರ್ ಅವರು ಆಧುನಿಕ ಸಮಾಜದಲ್ಲಿ ಜ್ಞಾನಾಧಾರಿತ ಮಾನವ ಸಮುದಾಯದ ನಿರ್ಮಾಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – 2020 ಪ್ರಮುಖ ಪಾತ್ರ ವಹಿಸಲಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ವೇದಿಕೆಯಲ್ಲಿ ದ.ಕ ಪದವಿ ಪೂರ್ವ ಇಲಾಖೆಯ ನಿರ್ದೇಶಕರಾದ ಶ್ರೀ ಡಿ. ಜಯಣ್ಣ ಮುಖ್ಯ ಅತಿಥಿಯಾಗಿ ಭಾಗಿಯಾಗಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಎರಡು ದಿನಗಳ ಕಾಲ ನಡೆಯಲಿರುವ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಕ್ತಿ ವಿದ್ಯಾ ಸಂಸ್ಥೆ ಅಧ್ಯಕ್ಷರಾದ ಶ್ರೀ ಕೆ.ಸಿ ನಾೈಕ್ ವಹಿಸಿದ್ದು, ವೇದಿಕೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಖಾಧಿಕಾರಿ ಶ್ರೀ ವೆಂಕಟೇಶ್, ದ.ಕ ಪದವಿ ಪೂರ್ವ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಶ್ರೀ ಗಂಗಾಧರ ಆಳ್ವ, ಮಂಗಳೂರು ದಕ್ಷಿಣ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಜಯಂತಿ ಸೋನ್ಸ್, ಶಕ್ತಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪೃಥ್ವಿರಾಜ್, ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್.ಕೆ., ಹಾಗೂ ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.
ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಶ್ರೀ ಗಂಗಾಧರ ಆಳ್ವ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀ ಯೂಸುಫ್ ಅವರು ಕಾರ್ಯಕ್ರಮ ನಿರೂಪಿಸಿ, ಉಪಾಧ್ಯಕ್ಷರಾದ ವಿನಾಯಕ್ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.