ಬಂಟ್ವಾಳ (www.vknews.in) : ಮಂಗಳೂರು ತಾಲೂಕಿನ ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಓರ್ವ ಬಾಲಕ ನೀರು ಪಾಲಾಗಿದ್ದು ಉಳಿದ ನಾಲ್ವರನ್ನು ರಕ್ಷಿಸಲಾದ ಘಟನೆ ರವಿವಾರ ಸಂಜೆ ನಡೆದಿದೆ.
ಈಜಾಡುತ್ತಿದ್ದ ವೇಳೆ ಇಬ್ಬರು ಬಾಲಕರು ನೀರು ಪಾಲಾಗಿದ್ದು ಈ ವೇಳೆ ಹರ್ಷ ಎಂಬ ಬಾಲಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.ಉಳಿದ ಮೂವರು ಬಾಲಕರು ಸುರಕ್ಷಿತವಾಗಿ ದಡ ಸೇರಿದ್ದಾರೆ. ಅಶ್ವಿತ್ (19) ಎಂಬಾತನು ನೀರು ಪಾಲಾಗಿ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗಿದೆ. ಬಾಲಕ ಹರ್ಷ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಪತ್ತೆಯಾದ ಬಾಲಕನಿಗಾಗಿ ಅಗ್ನಶಾಮಕ ದಳ ಸಿಬ್ಬಂದಿ, ಸ್ಥಳೀಯ ಈಜುಗಾರರು ಹುಡುಕಾಟ ನಡೆಸಿದ್ದು ನದಿಯಲ್ಲಿ ನೀರಿನ ಹರಿವು ಹೆಚ್ಚಿರುವುದರಿಂದ ಹುಡುಕಾಟಕ್ಕೆ ಅಡಚಣೆಯಾಗಿದೆ.
ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಶಾಸಕ ಯು.ಟಿ.ಖಾದರ್, ನಾಪತ್ತೆಯಾದ ಬಾಲಕನ ಪತ್ತೆಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದ್ದು, ಸಜಿಪಪಡು ಸಮೀಪದ ಪಾವೂರು, ಹರೇಕಳ, ಅಂಬ್ಲಮೊಗರು, ಉಳಿಯ, ಉಳ್ಳಾಲ ಭಾಗದಲ್ಲಿ ಪತ್ತೆ ಕಾರ್ಯ ನಡೆಸುವಂತೆ ಸೂಚಿಸಿದ್ದಾರೆ.
ಅಲ್ಲದೆ ನೀರುಪಾಲಾಗಿದ್ದ ಹರ್ಷ ನನ್ನು ಸ್ಥಳೀಯರಾದ ಫಾರಿಶ್, ಅನ್ವರ್, ಝುಭೈರ್ ಮತ್ತು ಶರತ್ ಎಂಬವರು ಸೇರಿ ರಕ್ಷಿಸಿದ್ದು, ಶಾಸಕ ಯು.ಟಿ.ಖಾದರ್ ರಕ್ಷಿಸಿದ ಯುವಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ. ಹರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಮುಳುಗು ತಜ್ಞರ ಸಹಾಯ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಮೂಲಕ ಹುಡುಕಾಟ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.