ಮಂಗಳೂರು (www.vknews.in) : ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಕನ್ನಡ ಪತ್ರಿಕಾ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜುಲೈ ೪ರ ಸೋಮವಾರದಂದು ಶಿವರಾಮ ಕಾರಂತ ಭವನದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ವಿಶ್ವವಾಣಿ ಪತ್ರಿಕೆಯ ವಿಶೇಷ ವರದಿಗಾರ ಜಿತೇಂದ್ರ ಕುಂದೇಶ್ವರರವರು ಪತ್ರಿಕೋದ್ಯಮ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭ ಮಾತನಾಡಿದ ಅವರು, ಉತ್ತಮ ಮಾತು, ಆಹಾರ ಮತ್ತು ನೀರು ಮೂರು ರತ್ನಗಳಿದ್ದತೆ. ಪತ್ರಿಕೋದ್ಯಮವು ಒಬ್ಬ ವ್ಯಕ್ತಿಯ ಜ್ಞಾನವನ್ನು ವೃದ್ದಿಸುತ್ತದೆ. ನಿಜವಾದ ಪತ್ರಿಕೋದ್ಯಮ ಸಾಮಾಜಿಕ ಸೇವೆಗಾಗಿ ಸಮಾಜದ ಒಳಿತಿಗಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ ವಹಿಸಿದರು. ಜಿತೇಶ್ ಹಾಗೂ ಯಾವೇಜ್ರವರ ದೇಶಭಕ್ತಿ ಗೀತೆಯ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ವಿದ್ಯಾರ್ಥಿ ಗಣೇಶ್ ಆದ್ಯಪಾಡಿ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕ ಸಚ್ಚೇಂದ್ರ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ವಿದ್ಯಾರ್ಥಿ ಕಾವ್ಯ ವಂದಿಸಿದರು.
ಕಾರ್ಯಕ್ರಮದಲ್ಲಿ ಬೋಧಕ ಹಾಗೂ ಬೋಧಕೇತರ ವರ್ಗ, ಬಿಎ ಪತ್ರಿಕೋದ್ಯಮ ವಿದ್ಯಾರ್ಥಿಗಳು ಹಾಗೂ ಮುಕ್ತ ಆಯ್ಕೆ ವಿಷಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.